2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಇಂದು (ಏ.8) ಪ್ರಕಟವಾಗಿದೆ.
https://karresults.nic.in/ ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ
7.13 ಲಕ್ಷ ವಿದ್ಯಾರ್ಥಿಗಳು ಬಹುನಿರೀಕ್ಷೆಯಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆ 1 ರಿಸಲ್ಟ್ ಇಂದು ಬಿಡುಗಡೆ ಆಗಿದೆ. ಪರೀಕ್ಷೆ ಬರೆದವರು ತಮ್ಮ ರಿಜಿಸ್ಟರ್ ನಂಬರ್ ಮೂಲಕ ಕೆಎಸ್ಇಎಬಿ ನೀಡುವ https://karresults.nic.in ಜಾಲತಾಣದಲ್ಲಿ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದು.
ಸೆಕೆಂಡ್ ಪಿಯುಸಿ ಫಲಿತಾಂಶ ಪ್ರಕಟ
ರಾಜ್ಯದಲ್ಲಿ ಉಡುಪಿ (93.90)ಟಾಪರ್, ದ್ವಿತೀಯ ಹಾಗೂ ತೃತೀಯ ಸ್ಥಾನಗಳಲ್ಲಿ ದಕ್ಷಿಣ ಕನ್ನಡ ಹಾಗೂ ಬೆಂಗಳೂರು ದಕ್ಷಿಣ, ಯಾದಗಿರಿಗೆ ಕೊನೆಯ ಸ್ಥಾನ ಶೇ.73.45.
ರಾಜ್ಯದಲ್ಲಿ ಒಟ್ಟು ಶೇಕಡ 73.45ರಷ್ಟು ಉತ್ತೀರ್ಣರಾದ ವಿದ್ಯಾರ್ಥಿಗಳು
ಕಲಾ ಸಂಯೋಜನೆಯಲ್ಲಿ ಶೇಕಡ.53.29 ಫಲಿತಾಂಶ, ವಾಣಿಜ್ಯ ಸಂಯೋಜನೆಯಲ್ಲಿ ಶೇಕಡ.76.07, ವಿಜ್ಞಾನ ಸಂಯೋಜನೆಯಲ್ಲಿ ಶೇಕಡ.82.54 ಫಲಿತಾಂಶ ಬಂದಿದೆ.
ಈ ಬಾರಿ 73.4% ಮಕ್ಕಳು ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ 57%, ಅನುದಾನಿತ ಕಾಲೇಜುಗಳಲ್ಲಿ 60%, ಅನುದಾನ ರಹಿತ ಕಾಲೇಜುಗಳಲ್ಲಿ 90%, ವಸತಿ ಶಾಲೆಗಳಲ್ಲಿ ಅತ್ಯುತ್ತಮ ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವರು ತಿಳಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆ 1 ರಲ್ಲಿ ಒಟ್ಟಾರೆ 1,99,227 ಬಾಲಕರು, 2,69,212 ಬಾಲಕಿಯರು ತೇರ್ಗಡೆ ಆಗಿದ್ದಾರೆ.
ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಐಎನ್ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ ಟಾಪರ್ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್ನ ಕೆನೆರಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ ದೀಪಾಶ್ರೀ ಎಸ್. 599 ಅಂಕ ಗಳಿಸುವ ಮೂಲಕ ಟಾಪರ್ ಆಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕೊಡಿಬೈಲ್ನ ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಎಸ್. 597 ಅಂಕ ಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…