2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 79.70 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 8ನೇ ಸ್ಥಾನವನ್ನು ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ 10935 ವಿದ್ಯಾರ್ಥಿಗಳ ಪೈಕಿ 8361 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಜಿಲ್ಲೆಯು ಶೇ. 76.46 ರಷ್ಟು ಫಲಿತಾಂಶ ಪಡೆದಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳಲ್ಲಿ 2024-25ನೇ ಸಾಲಿನಲ್ಲಿ ಮೊದಲ ಬಾರಿಗೆ ಪರೀಕ್ಷೆಗೆ ಹಾಜರಾದ 10354 ವಿದ್ಯಾರ್ಥಿಗಳ ಪೈಕಿ 8252 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 79.70 ರಷ್ಟು ಫಲಿತಾಂಶ ದೊರಕಿದೆ.
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 4893 ಬಾಲಕರು ಹಾಜರಾಗಿದ್ದು, 3530 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 72.14 ರಷ್ಟು ಫಲಿತಾಂಶ ಹಾಗೂ 6042 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 4831 ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ. 79.96 ರಷ್ಟು ಫಲಿತಾಂಶ ದೊರಕಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಕಲಾ ವಿಭಾಗದಿಂದ 1126 ವಿದ್ಯಾರ್ಥಿಗಳು ಹಾಜರಾಗಿದ್ದು,527 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 46.8 ರಷ್ಟು ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗದಿಂದ 5249 ವಿದ್ಯಾರ್ಥಿಗಳು ಹಾಜರಾಗಿದ್ದು, 3959 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 75.42 ರಷ್ಟು ಫಲಿತಾಂಶ ದೊರೆತಿದೆ.
ವಿಜ್ಞಾನ ವಿಭಾಗದಿಂದ 4560 ವಿದ್ಯಾರ್ಥಿಗಳು ಹಾಜರಾಗಿದ್ದು, 3875 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 84.98 ರಷ್ಟು ಫಲಿತಾಂಶ ಪಡೆದಿದೆ.
ನಗರ ಪ್ರದೇಶದ 8479 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 6531 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.77.03 ರಷ್ಟು ಫಲಿತಾಂಶ ದೊರೆತಿದೆ.
ಗ್ರಾಮೀಣ ಪ್ರದೇಶದ 2456 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1830 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 74.51 ರಷ್ಟು ಫಲಿತಾಂಶ ದೊರೆತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…