2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 79.70 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 8ನೇ ಸ್ಥಾನವನ್ನು ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ 10935 ವಿದ್ಯಾರ್ಥಿಗಳ ಪೈಕಿ 8361 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಜಿಲ್ಲೆಯು ಶೇ. 76.46 ರಷ್ಟು ಫಲಿತಾಂಶ ಪಡೆದಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳಲ್ಲಿ 2024-25ನೇ ಸಾಲಿನಲ್ಲಿ ಮೊದಲ ಬಾರಿಗೆ ಪರೀಕ್ಷೆಗೆ ಹಾಜರಾದ 10354 ವಿದ್ಯಾರ್ಥಿಗಳ ಪೈಕಿ 8252 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 79.70 ರಷ್ಟು ಫಲಿತಾಂಶ ದೊರಕಿದೆ.
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 4893 ಬಾಲಕರು ಹಾಜರಾಗಿದ್ದು, 3530 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 72.14 ರಷ್ಟು ಫಲಿತಾಂಶ ಹಾಗೂ 6042 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 4831 ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ. 79.96 ರಷ್ಟು ಫಲಿತಾಂಶ ದೊರಕಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಕಲಾ ವಿಭಾಗದಿಂದ 1126 ವಿದ್ಯಾರ್ಥಿಗಳು ಹಾಜರಾಗಿದ್ದು,527 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 46.8 ರಷ್ಟು ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗದಿಂದ 5249 ವಿದ್ಯಾರ್ಥಿಗಳು ಹಾಜರಾಗಿದ್ದು, 3959 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 75.42 ರಷ್ಟು ಫಲಿತಾಂಶ ದೊರೆತಿದೆ.
ವಿಜ್ಞಾನ ವಿಭಾಗದಿಂದ 4560 ವಿದ್ಯಾರ್ಥಿಗಳು ಹಾಜರಾಗಿದ್ದು, 3875 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 84.98 ರಷ್ಟು ಫಲಿತಾಂಶ ಪಡೆದಿದೆ.
ನಗರ ಪ್ರದೇಶದ 8479 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 6531 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.77.03 ರಷ್ಟು ಫಲಿತಾಂಶ ದೊರೆತಿದೆ.
ಗ್ರಾಮೀಣ ಪ್ರದೇಶದ 2456 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1830 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 74.51 ರಷ್ಟು ಫಲಿತಾಂಶ ದೊರೆತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…
ನ್ಯೂಯಾರ್ಕ್–ನ್ಯೂಜೆರ್ಸಿ: ತೀವ್ರ ಕುತೂಹಲ ಕೆರಳಿಸಿದ್ದ ಫಿಫಾ ವಿಶ್ವಕಪ್-2026ರ ಫೈನಲ್ನಲ್ಲಿ ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ವಿಶ್ವ ಚಾಂಪಿಯನ್ ಅರ್ಜೆಂಟೀನಾವನ್ನು 1-0…
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಡಿಯೋ…
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಬರ ಪರಿಸ್ಥಿತಿ, ಮಳೆಗಾಲ, ಕುಡಿಯುವ ನೀರು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ನವೋದಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಆಸರೆ–ಸನ್ಮಿತ್ರ ಯೋಜನೆಯಡಿ…
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ...... ಸರಳವಾಗಿ ಬಹು ಆಯಾಮಗಳ ಒಂದು ಚಿಂತನ ಮಂಥನ........ ಕರ್ನಾಟಕದ ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಮೀಸಲಾತಿಯ…