ಬೆಂಗಳೂರು : ದ್ವಿತೀಯ ಪಿಯುಸಿ ರಿಸಲ್ಟ್ ಹೊರಬಂದಿದ್ದು, ಪರೀಕ್ಷೆಯಲ್ಲಿ ನಪಾಸಾಗಿದ್ದಕ್ಕೆ ಮನನೊಂದ ವಿದ್ಯಾರ್ಥಿಗಳು ಸೂಸೈಡ್ ಮಾಡಿಕೊಂಡಿದ್ದಾರೆ.
ರಿಸಲ್ಟ್ ನೋಡಿ ಬೇಸರಗೊಂಡ ರಾಜ್ಯದ ವಿವಿಧ ಭಾಗದ ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. ಮಕ್ಕಳನ್ನು ಕಳೆದುಕೊಂಡು ಪೋಷಕರು ಕಂಗಾಲಾಗಿದ್ದಾರೆ.
ದಾವಣಗೆರೆ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೃಪಾ(18), ಹಾವೇರಿ ಜಿಲ್ಲೆಯ ಚಿನ್ನಮುಳಗುಂದ ತಾಂಡಾದ ಕಾವ್ಯ ಬಸಪ್ಪ ಲಮಾಣಿ , ಬಳ್ಳಾರಿ ಜಿಲ್ಲೆಯ ವಿಜಯಲಕ್ಷ್ಮಿ, ಮೈಸೂರಿನ ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯಾ(17) ಸೂಸೈಡ್ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತ ವಿದ್ಯಾರ್ಥಿಗಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.