ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಜಿಲ್ಲೆಯಲ್ಲಿ ಸುವ್ಯವಸ್ಥಿತವಾಗಿ ನಡೆಯಲು ಅಗತ್ಯ ಕ್ರಮವಹಿಸಿ: ಡಾ.ನಾಗರಾಜ

ಮಾರ್ಚ್ 09 ರಿಂದ ಮಾರ್ಚ್ 29 ರವರೆಗೆ ನಡೆಯಲಿರುವ 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಜಿಲ್ಲೆಯಲ್ಲಿ ಸುವ್ಯವಸ್ಥಿತವಾಗಿ ನಡೆಯಲು ಅಗತ್ಯ ಕ್ರಮ ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಡಾ.ನಾಗರಾಜ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ವ್ಯವ್ಯಸ್ಥಿತವಾಗಿ ನಡೆಸುವ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2023ರ ಮಾರ್ಚ್ 09 ರಿಂದ ಮಾರ್ಚ್ 29 ರವರೆಗೆ, ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ 05, ಹೊಸಕೋಟೆ ತಾಲ್ಲೂಕಿನ 04, ದೊಡ್ಡಬಳ್ಳಾಪುರ ತಾಲ್ಲೂಕಿನ 03 ಹಾಗೂ ದೇವನಹಳ್ಳಿ ತಾಲ್ಲೂಕಿನ 03 ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟಾರೆ 15 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ನಡೆಯಲಿದೆ.

ಪರೀಕ್ಷೆಗೆ ಹಾಜರಾಗುತ್ತಿರುವ ಒಟ್ಟಾರೆ ಜಿಲ್ಲೆಯ 10320 ವಿದ್ಯಾರ್ಥಿಗಳಲ್ಲಿ, 9013 ಹೊಸ ವಿದ್ಯಾರ್ಥಿಗಳು, 1045 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 262 ಖಾಸಗಿ ವಿದ್ಯಾರ್ಥಿಗಳಾಗಿದ್ದಾರೆ.

ಪರೀಕ್ಷೆಗೆ ಹಾಜರಾಗುತ್ತಿರುವ ಒಟ್ಟು 10,320 ವಿದ್ಯಾರ್ಥಿಗಳಲ್ಲಿ 4724 ಬಾಲಕರು, 5596 ಬಾಲಕಿಯರು ಇದ್ದಾರೆ. ಒಟ್ಟಾರೆ ವಿದ್ಯಾರ್ಥಿಗಳಲ್ಲಿ, ಕಲಾ ವಿಭಾಗದ 1590 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ 5552 ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದ 3178 ವಿದ್ಯಾರ್ಥಿಗಳು ಇದ್ದಾರೆ ಎಂದು ಮಾಹಿತಿ ನೀಡಿದರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯೊಳಗೆ ಕಟ್ಟುನಿಟ್ಟಿನ ನಿಷೇಧಾಜ್ಞೆ ಹೊರಡಿಸಬೇಕು ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕೆಂದು ಪೊಲೀಸ್ ಇಲಾಖೆಗೆ ಹಾಗೂ ಪರೀಕ್ಷಾ ಕೊಠಡಿಯೊಳಗೆ ಮೇಲ್ವಿಚಾರಕರು ಕಡ್ಡಾಯವಾಗಿ ಮೊಬೈಲ್ ಕೊಂಡೊಯ್ಯದಂತೆ ಕ್ರಮಕೈಗೊಳ್ಳಬೇಕೆಂದು ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗೆ ತಿಳಿಸಿದರಲ್ಲದೆ, ಸಿ.ಸಿ.ಟಿವಿ ಕಣ್ಗಾಗವಲಿನಲ್ಲಿ ಪರೀಕ್ಷೆ ನಡೆಯಲಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಕಂಠಯ್ಯ ಸೇರಿದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಭಾರತದ ಮಧ್ಯಮ ವರ್ಗದವರ ಸಿಹಿ-ಕಹಿಗಳು, ನಿರಾಸೆ ಮತ್ತು ಜೀವನೋತ್ಸಾಹ…..

ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…

46 minutes ago

ದೊಡ್ಡಬಳ್ಳಾಪುರದಲ್ಲಿ ಕಳ್ಳರ ಹಾವಳಿ: ಸರ, ಬೈಕ್‌ನಿಂದ ಹಸುಗಳವರೆಗೆ ಕಳವು – ಜನರಲ್ಲಿ ಹೆಚ್ಚಿದ ಆತಂಕ

ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…

2 hours ago

ಸಿಎಂ, ಡಿಸಿಎಂ, ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…

2 hours ago

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

13 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

16 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

20 hours ago