ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 01 ರಿಂದ ಮಾರ್ಚ್ 22 ರವರೆಗೆ ನಡೆಯಲಿದ್ದು. 15 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚಲು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಿ.ಆರ್.ಪಿ.ಸಿ 1973, ಕಲಂ 144 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮಾರ್ಚ್ 01 ರಿಂದ ಮಾರ್ಚ್ 22 ರವರೆಗೆ ಪರೀಕ್ಷಾ ನಡೆಯುವ ದಿನಗಳಂದು ಪರೀಕ್ಷಾ ಸ್ಥಳದ ಸುತ್ತಮುತ್ತಲು 200 ಮೀಟರ್ ಪ್ರದೇಶಗಳ ವ್ಯಾಪ್ತಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಅವರು ಆದೇಶಿಸಿದ್ದಾರೆ.
2024ರ ಮಾರ್ಚ್ ಮಾಹೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 01 ರಿಂದ ಮಾರ್ಚ್ 22 ರವರೆಗೆ ಪರೀಕ್ಷೆಗಳು ನಡೆಯಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು, ಶ್ರೀ ಬಸವೇಶ್ವರ ಪದವಿ ಪೂರ್ವ ಕಾಲೇಜು, ಶ್ರೀ ಬಸವೇಶ್ವರ ಬಾಲಕಿಯರ ಪದವಿ ಪೂರ್ವ ಕಾಲೇಜು, ಹೊಯ್ಸಳ ಪದವಿ ಪೂರ್ವ ಕಾಲೇಜು ಪರಮಣ್ಣ ಲೇಔಟ್, ಸರ್ಕಾರಿ ಪದವಿ ಪೂರ್ವ ಕಾಲೇಜು ತ್ಯಾಮಗೊಂಡ್ಲು.
ದೊಡ್ಡಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು,ದೇವರಾಜ್ ಅರಸ್ ಪದವಿ ಪೂರ್ವ ಕಾಲೇಜು ಕೊಡಿಗೇನಹಳ್ಳಿ.
ದೇವನಹಳ್ಳಿ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ದೇವನಹಳ್ಳಿ, ಸರ್ಕಾರಿ ಪದವಿ ಪೂರ್ವ ಕಾಲೇಜು ವಿಜಯಪುರ, ಪ್ರಗತಿ ಬಾಲಕಿಯರ ಪದವಿ ಪೂರ್ವ ಕಾಲೇಜು ವಿಜಯಪುರ.
ಹೊಸಕೋಟೆ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಹೊಸಕೋಟೆ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಹೊಸಕೋಟೆ, ಸರ್ಕಾರಿ ಪದವಿ ಪೂರ್ವ ಕಾಲೇಜು ನಂದಗುಡಿ, ಮಹದೇವ ಪದವಿ ಪೂರ್ವ ಕಾಲೇಜು ಹೊಸಕೋಟೆ. ಈ ಎಲ್ಲಾ 15 ಪರೀಕ್ಷಾ ಕೇಂದ್ರ ಸ್ಥಳಗಳ ಸುತ್ತಮುತ್ತಲು 200 ಮೀಟರ್ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಸೆಕ್ಷನ್ 144 ಸಿ.ಆರ್.ಪಿ.ಸಿ ರೀತ್ಯಾ ನಿಷೇದಾಜ್ಞೆಯನ್ನು ವಿಧಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…