Categories: ಶಿಕ್ಷಣ

ದ್ವಿತೀಯ ಪಿಯು ಪರೀಕ್ಷೆ-2024 : ಜಿಲ್ಲೆಯಲ್ಲಿ 9,928 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ: ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಸಕಲ‌ ಸಿದ್ಧತೆ

ದೊಡ್ಡಬಳ್ಳಾಪುರ: ಇಂದಿನಿಂದ (ಮಾರ್ಚ್.1) ಪ್ರಾರಂಭವಾಗಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಜಿಲ್ಲೆಯ 15 ಪರೀಕ್ಷಾ ಕೇಂದ್ರಗಳಲ್ಲಿ 9,928 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕ ಡಾ.ಬಾಲಗುರುಮೂರ್ತಿ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ನೆಲಮಂಗಲದಲ್ಲಿ 5 ಪರೀಕ್ಷಾ ಕೇಂದ್ರಗಳಿವೆ. ಹೊಸಕೋಟೆ 4, ದೇವನಹಳ್ಳಿ 3 ಹಾಗೂ ದೊಡ್ಡಬಳ್ಳಾಪುರದಲ್ಲಿ 3 ಪರೀಕ್ಷಾ ಕೇಂದ್ರಗಳಿವೆ.

ಜಿಲ್ಲೆಯಲ್ಲಿ ಕಲಾ ವಿಭಾಗದಲ್ಲಿ 1,024, ವಾಣಿಜ್ಯ ವಿಭಾಗದಲ್ಲಿ 4,812, ವಿಜ್ಞಾನ ವಿಭಾಗದಲ್ಲಿ 3,856 ಜನ ವಿದ್ಯಾರ್ಥಿಗಳು ಇದ್ದಾರೆ.

236 ಜನ ವಿದ್ಯಾರ್ಥಿಗಳು ಖಾಸಗಿಯಾಗಿ ಪರೀಕ್ಷೆ ಪಡೆದಿದ್ದಾರೆ.

ಒಟ್ಟಾರೆ 5,425 ವಿದ್ಯಾರ್ಥಿನಿಯರು, 4,267 ಜನ ವಿದ್ಯಾರ್ಥಿಗಳು ಇದ್ದಾರೆ.

ಯಾವುದೇ ರೀತಿಯ ಪರೀಕ್ಷಾ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಅಗತ್ಯ ಇರುವ ಎಲ್ಲಾ ಕ್ರಮಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಅದರಂತೆ ಎಲ್ಲಾ ಸಿದ್ಧತೆಗಳ ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

6 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

17 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago