ದೊಡ್ಡಬಳ್ಳಾಪುರ: ಇಂದಿನಿಂದ (ಮಾರ್ಚ್.1) ಪ್ರಾರಂಭವಾಗಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಜಿಲ್ಲೆಯ 15 ಪರೀಕ್ಷಾ ಕೇಂದ್ರಗಳಲ್ಲಿ 9,928 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕ ಡಾ.ಬಾಲಗುರುಮೂರ್ತಿ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ನೆಲಮಂಗಲದಲ್ಲಿ 5 ಪರೀಕ್ಷಾ ಕೇಂದ್ರಗಳಿವೆ. ಹೊಸಕೋಟೆ 4, ದೇವನಹಳ್ಳಿ 3 ಹಾಗೂ ದೊಡ್ಡಬಳ್ಳಾಪುರದಲ್ಲಿ 3 ಪರೀಕ್ಷಾ ಕೇಂದ್ರಗಳಿವೆ.
ಜಿಲ್ಲೆಯಲ್ಲಿ ಕಲಾ ವಿಭಾಗದಲ್ಲಿ 1,024, ವಾಣಿಜ್ಯ ವಿಭಾಗದಲ್ಲಿ 4,812, ವಿಜ್ಞಾನ ವಿಭಾಗದಲ್ಲಿ 3,856 ಜನ ವಿದ್ಯಾರ್ಥಿಗಳು ಇದ್ದಾರೆ.
236 ಜನ ವಿದ್ಯಾರ್ಥಿಗಳು ಖಾಸಗಿಯಾಗಿ ಪರೀಕ್ಷೆ ಪಡೆದಿದ್ದಾರೆ.
ಒಟ್ಟಾರೆ 5,425 ವಿದ್ಯಾರ್ಥಿನಿಯರು, 4,267 ಜನ ವಿದ್ಯಾರ್ಥಿಗಳು ಇದ್ದಾರೆ.
ಯಾವುದೇ ರೀತಿಯ ಪರೀಕ್ಷಾ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಅಗತ್ಯ ಇರುವ ಎಲ್ಲಾ ಕ್ರಮಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಅದರಂತೆ ಎಲ್ಲಾ ಸಿದ್ಧತೆಗಳ ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…