ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ನನ್ನ ಅಭಿಪ್ರಾಯವೇ ನಮ್ಮ ಸರ್ಕಾರದ ಅಭಿಪ್ರಾಯವನ್ನಾಗಿಸುವ ದಿಕ್ಕಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ.
ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು ಅವರ ಆಶಯವಾಗಿತ್ತು. ಆದರೆ, ಇಂದು ಶಿಕ್ಷಣ ಹೆಚ್ಚಾದಷ್ಟೂ ಮೌಡ್ಯ, ಕಂದಾಚಾರ ಹೆಚ್ಚಾಗಿ ವೈಜ್ಞಾನಿಕ ಪ್ರಜ್ಞೆ ಕಡಿಮೆಯಾಗುತ್ತಿದೆ ಎಂದು ತಿಳಿಸಿದರು.
ನಮ್ಮ ಸಂವಿಧಾನದಲ್ಲಿ ಕುವೆಂಪು, ಬಸವಣ್ಣ ಅವರ ಆಶಯಗಳೂ ಅಡಕವಾಗಿವೆ. ಸಂವಿಧಾನದ ಮೌಲ್ಯ ಮತ್ತು ಮಹತ್ವ ಅರಿಯುವ ಕೆಲಸ ಹೆಚ್ಚಾಗಬೇಕು. ಈ ಉದ್ದೇಶದಿಂದಲೇ ಸಂವಿಧಾನ ಓದು, ಸಂವಿಧಾನ ಪೀಠಿಕೆ ಅಭಿಯಾನವನ್ನು ನಾವು ನಡೆಸುತ್ತಿದ್ದೇವೆ ಎಂದರು.
ರಾಜಕಾರಣಿಯಾಗಿ ನನಗೆ ಕೆಲವು ಮಿತಿಗಳು ಇರುತ್ತವೆ. ಸಮಾಜದ ನಂಬಿಕೆಗಳ ಜೊತೆಗೂ ನಾವು ಕೆಲವೊಮ್ಮೆ ನಡೆಯಬೇಕಾಗುತ್ತದೆ. ನಾನು ದೇವಸ್ಥಾನಕ್ಕೆ ಹೋದಾಗ ಕುಂಕಮ ಇಡುತ್ತಾರೆ. ಕುಂಕುಮ ಇಟ್ಟಿದ್ದಕ್ಕೂ ಕತೆ ಕಟ್ಟುತ್ತಾರೆ. ನಾವು ಗ್ರಾಮೀಣ ಭಾಗಕ್ಕೆ ಹೋದಾಗ ದೇವಸ್ಥಾನಗಳಿಗೆ ಹೋಗದಿದ್ದರೆ ನಮ್ಮ ಬಗ್ಗೆ ಬೇರೆಯದೇ ರೀತಿಯ ಕತೆ ಕಟ್ಟುತ್ತಾರೆ ಎಂದು ಹೇಳಿದರು.
ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದೇ ಹೋದರೆ ಕೇವಲ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ. ಈ ಕಾರಣಕ್ಕೇ ಮೌಢ್ಯ ನಿಷೇಧ ಕಾಯ್ದೆ ಪರಿಣಾಮಕಾರಿ ಆಗುವುದಿಲ್ಲ. ನಾವು ಏನೇ ಕಾನೂನು, ನಿಯಮ ಮಾಡಿದರೂ ಸಂವಿಧಾನದ ಚೌಕಟ್ಟಿಗೇ ಒಳಪಟ್ಟಿರಬೇಕು ಎಂದು ತಿಳಿಸಿದರು.
“ಗುಡಿ, ಚರ್ಚು, ಮಸೀದಿಗಳನ್ನು ಬಿಟ್ಟು ಹೊರ ಬನ್ನಿ, ಬಡತನದ ಬೇರುಗಳ ಬುಡ ಸಮೇತ ಕಿತ್ತು ಹಾಕಲು ಬನ್ನಿ” ಎಂದು ಕುವೆಂಪು ಅವರು ಕರೆ ನೀಡಿದ್ದರು. ಈ ಕರೆಯನ್ನು ಸಮಾಜ ಪಾಲಿಸಿದರೆ ಅಸಮಾನತೆಯ ಸಮಾಜ ಸಮಾನತೆಯ ಕಡೆ ಚಲಿಸುತ್ತದೆ. ಕುವೆಂಪು ಅವರ ಆಶಯ ಮತ್ತು ಮೌಲ್ಯಗಳು ಇಡೀ ವಿಶ್ವಕ್ಕೇ ಅನ್ವಯ ಆಗುವುದರಿಂದ ಜಗತ್ತಿನ ಇತರೆ ಭಾಷೆಗಳಿಗೂ ಈ ಕೃತಿ ಅನುವಾದವಾಗಲಿ ಎಂಬುದು ನನ್ನ ಇಂಗಿತ ಎಂದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…