ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ- ಸಿಎಂ ಸಿದ್ದರಾಮಯ್ಯ

ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ನನ್ನ ಅಭಿಪ್ರಾಯವೇ ನಮ್ಮ ಸರ್ಕಾರದ ಅಭಿಪ್ರಾಯವನ್ನಾಗಿಸುವ ದಿಕ್ಕಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ.
ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು ಅವರ ಆಶಯವಾಗಿತ್ತು. ಆದರೆ, ಇಂದು ಶಿಕ್ಷಣ ಹೆಚ್ಚಾದಷ್ಟೂ ಮೌಡ್ಯ, ಕಂದಾಚಾರ ಹೆಚ್ಚಾಗಿ ವೈಜ್ಞಾನಿಕ ಪ್ರಜ್ಞೆ ಕಡಿಮೆಯಾಗುತ್ತಿದೆ ಎಂದು ತಿಳಿಸಿದರು.

ನಮ್ಮ ಸಂವಿಧಾನದಲ್ಲಿ ಕುವೆಂಪು, ಬಸವಣ್ಣ ಅವರ ಆಶಯಗಳೂ ಅಡಕವಾಗಿವೆ. ಸಂವಿಧಾನದ ಮೌಲ್ಯ ಮತ್ತು ಮಹತ್ವ ಅರಿಯುವ ಕೆಲಸ ಹೆಚ್ಚಾಗಬೇಕು. ಈ ಉದ್ದೇಶದಿಂದಲೇ ಸಂವಿಧಾನ ಓದು, ಸಂವಿಧಾನ ಪೀಠಿಕೆ ಅಭಿಯಾನವನ್ನು ನಾವು ನಡೆಸುತ್ತಿದ್ದೇವೆ ಎಂದರು.

ರಾಜಕಾರಣಿಯಾಗಿ ನನಗೆ ಕೆಲವು ಮಿತಿಗಳು ಇರುತ್ತವೆ. ಸಮಾಜದ ನಂಬಿಕೆಗಳ ಜೊತೆಗೂ ನಾವು ಕೆಲವೊಮ್ಮೆ ನಡೆಯಬೇಕಾಗುತ್ತದೆ. ನಾನು ದೇವಸ್ಥಾನಕ್ಕೆ ಹೋದಾಗ ಕುಂಕಮ ಇಡುತ್ತಾರೆ. ಕುಂಕುಮ ಇಟ್ಟಿದ್ದಕ್ಕೂ ಕತೆ ಕಟ್ಟುತ್ತಾರೆ. ನಾವು ಗ್ರಾಮೀಣ ಭಾಗಕ್ಕೆ ಹೋದಾಗ ದೇವಸ್ಥಾನಗಳಿಗೆ ಹೋಗದಿದ್ದರೆ ನಮ್ಮ ಬಗ್ಗೆ ಬೇರೆಯದೇ ರೀತಿಯ ಕತೆ ಕಟ್ಟುತ್ತಾರೆ ಎಂದು ಹೇಳಿದರು.

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದೇ ಹೋದರೆ ಕೇವಲ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ. ಈ ಕಾರಣಕ್ಕೇ ಮೌಢ್ಯ ನಿಷೇಧ ಕಾಯ್ದೆ ಪರಿಣಾಮಕಾರಿ ಆಗುವುದಿಲ್ಲ. ನಾವು ಏನೇ ಕಾನೂನು, ನಿಯಮ ಮಾಡಿದರೂ ಸಂವಿಧಾನದ ಚೌಕಟ್ಟಿಗೇ ಒಳಪಟ್ಟಿರಬೇಕು ಎಂದು ತಿಳಿಸಿದರು.

“ಗುಡಿ, ಚರ್ಚು, ಮಸೀದಿಗಳನ್ನು ಬಿಟ್ಟು ಹೊರ ಬನ್ನಿ, ಬಡತನದ ಬೇರುಗಳ ಬುಡ ಸಮೇತ ಕಿತ್ತು ಹಾಕಲು ಬನ್ನಿ” ಎಂದು ಕುವೆಂಪು ಅವರು ಕರೆ ನೀಡಿದ್ದರು. ಈ ಕರೆಯನ್ನು ಸಮಾಜ ಪಾಲಿಸಿದರೆ ಅಸಮಾನತೆಯ ಸಮಾಜ ಸಮಾನತೆಯ ಕಡೆ ಚಲಿಸುತ್ತದೆ. ಕುವೆಂಪು ಅವರ ಆಶಯ ಮತ್ತು ಮೌಲ್ಯಗಳು ಇಡೀ ವಿಶ್ವಕ್ಕೇ ಅನ್ವಯ ಆಗುವುದರಿಂದ ಜಗತ್ತಿನ ಇತರೆ ಭಾಷೆಗಳಿಗೂ ಈ ಕೃತಿ ಅನುವಾದವಾಗಲಿ ಎಂಬುದು ನನ್ನ ಇಂಗಿತ ಎಂದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 hour ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

3 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

4 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

11 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago