ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ- ಸಿಎಂ ಸಿದ್ದರಾಮಯ್ಯ

ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ನನ್ನ ಅಭಿಪ್ರಾಯವೇ ನಮ್ಮ ಸರ್ಕಾರದ ಅಭಿಪ್ರಾಯವನ್ನಾಗಿಸುವ ದಿಕ್ಕಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ.
ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು ಅವರ ಆಶಯವಾಗಿತ್ತು. ಆದರೆ, ಇಂದು ಶಿಕ್ಷಣ ಹೆಚ್ಚಾದಷ್ಟೂ ಮೌಡ್ಯ, ಕಂದಾಚಾರ ಹೆಚ್ಚಾಗಿ ವೈಜ್ಞಾನಿಕ ಪ್ರಜ್ಞೆ ಕಡಿಮೆಯಾಗುತ್ತಿದೆ ಎಂದು ತಿಳಿಸಿದರು.

ನಮ್ಮ ಸಂವಿಧಾನದಲ್ಲಿ ಕುವೆಂಪು, ಬಸವಣ್ಣ ಅವರ ಆಶಯಗಳೂ ಅಡಕವಾಗಿವೆ. ಸಂವಿಧಾನದ ಮೌಲ್ಯ ಮತ್ತು ಮಹತ್ವ ಅರಿಯುವ ಕೆಲಸ ಹೆಚ್ಚಾಗಬೇಕು. ಈ ಉದ್ದೇಶದಿಂದಲೇ ಸಂವಿಧಾನ ಓದು, ಸಂವಿಧಾನ ಪೀಠಿಕೆ ಅಭಿಯಾನವನ್ನು ನಾವು ನಡೆಸುತ್ತಿದ್ದೇವೆ ಎಂದರು.

ರಾಜಕಾರಣಿಯಾಗಿ ನನಗೆ ಕೆಲವು ಮಿತಿಗಳು ಇರುತ್ತವೆ. ಸಮಾಜದ ನಂಬಿಕೆಗಳ ಜೊತೆಗೂ ನಾವು ಕೆಲವೊಮ್ಮೆ ನಡೆಯಬೇಕಾಗುತ್ತದೆ. ನಾನು ದೇವಸ್ಥಾನಕ್ಕೆ ಹೋದಾಗ ಕುಂಕಮ ಇಡುತ್ತಾರೆ. ಕುಂಕುಮ ಇಟ್ಟಿದ್ದಕ್ಕೂ ಕತೆ ಕಟ್ಟುತ್ತಾರೆ. ನಾವು ಗ್ರಾಮೀಣ ಭಾಗಕ್ಕೆ ಹೋದಾಗ ದೇವಸ್ಥಾನಗಳಿಗೆ ಹೋಗದಿದ್ದರೆ ನಮ್ಮ ಬಗ್ಗೆ ಬೇರೆಯದೇ ರೀತಿಯ ಕತೆ ಕಟ್ಟುತ್ತಾರೆ ಎಂದು ಹೇಳಿದರು.

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದೇ ಹೋದರೆ ಕೇವಲ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ. ಈ ಕಾರಣಕ್ಕೇ ಮೌಢ್ಯ ನಿಷೇಧ ಕಾಯ್ದೆ ಪರಿಣಾಮಕಾರಿ ಆಗುವುದಿಲ್ಲ. ನಾವು ಏನೇ ಕಾನೂನು, ನಿಯಮ ಮಾಡಿದರೂ ಸಂವಿಧಾನದ ಚೌಕಟ್ಟಿಗೇ ಒಳಪಟ್ಟಿರಬೇಕು ಎಂದು ತಿಳಿಸಿದರು.

“ಗುಡಿ, ಚರ್ಚು, ಮಸೀದಿಗಳನ್ನು ಬಿಟ್ಟು ಹೊರ ಬನ್ನಿ, ಬಡತನದ ಬೇರುಗಳ ಬುಡ ಸಮೇತ ಕಿತ್ತು ಹಾಕಲು ಬನ್ನಿ” ಎಂದು ಕುವೆಂಪು ಅವರು ಕರೆ ನೀಡಿದ್ದರು. ಈ ಕರೆಯನ್ನು ಸಮಾಜ ಪಾಲಿಸಿದರೆ ಅಸಮಾನತೆಯ ಸಮಾಜ ಸಮಾನತೆಯ ಕಡೆ ಚಲಿಸುತ್ತದೆ. ಕುವೆಂಪು ಅವರ ಆಶಯ ಮತ್ತು ಮೌಲ್ಯಗಳು ಇಡೀ ವಿಶ್ವಕ್ಕೇ ಅನ್ವಯ ಆಗುವುದರಿಂದ ಜಗತ್ತಿನ ಇತರೆ ಭಾಷೆಗಳಿಗೂ ಈ ಕೃತಿ ಅನುವಾದವಾಗಲಿ ಎಂಬುದು ನನ್ನ ಇಂಗಿತ ಎಂದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

5 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

15 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

15 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago