ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ- ಸಿಎಂ ಸಿದ್ದರಾಮಯ್ಯ

ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ನನ್ನ ಅಭಿಪ್ರಾಯವೇ ನಮ್ಮ ಸರ್ಕಾರದ ಅಭಿಪ್ರಾಯವನ್ನಾಗಿಸುವ ದಿಕ್ಕಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ.
ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು ಅವರ ಆಶಯವಾಗಿತ್ತು. ಆದರೆ, ಇಂದು ಶಿಕ್ಷಣ ಹೆಚ್ಚಾದಷ್ಟೂ ಮೌಡ್ಯ, ಕಂದಾಚಾರ ಹೆಚ್ಚಾಗಿ ವೈಜ್ಞಾನಿಕ ಪ್ರಜ್ಞೆ ಕಡಿಮೆಯಾಗುತ್ತಿದೆ ಎಂದು ತಿಳಿಸಿದರು.

ನಮ್ಮ ಸಂವಿಧಾನದಲ್ಲಿ ಕುವೆಂಪು, ಬಸವಣ್ಣ ಅವರ ಆಶಯಗಳೂ ಅಡಕವಾಗಿವೆ. ಸಂವಿಧಾನದ ಮೌಲ್ಯ ಮತ್ತು ಮಹತ್ವ ಅರಿಯುವ ಕೆಲಸ ಹೆಚ್ಚಾಗಬೇಕು. ಈ ಉದ್ದೇಶದಿಂದಲೇ ಸಂವಿಧಾನ ಓದು, ಸಂವಿಧಾನ ಪೀಠಿಕೆ ಅಭಿಯಾನವನ್ನು ನಾವು ನಡೆಸುತ್ತಿದ್ದೇವೆ ಎಂದರು.

ರಾಜಕಾರಣಿಯಾಗಿ ನನಗೆ ಕೆಲವು ಮಿತಿಗಳು ಇರುತ್ತವೆ. ಸಮಾಜದ ನಂಬಿಕೆಗಳ ಜೊತೆಗೂ ನಾವು ಕೆಲವೊಮ್ಮೆ ನಡೆಯಬೇಕಾಗುತ್ತದೆ. ನಾನು ದೇವಸ್ಥಾನಕ್ಕೆ ಹೋದಾಗ ಕುಂಕಮ ಇಡುತ್ತಾರೆ. ಕುಂಕುಮ ಇಟ್ಟಿದ್ದಕ್ಕೂ ಕತೆ ಕಟ್ಟುತ್ತಾರೆ. ನಾವು ಗ್ರಾಮೀಣ ಭಾಗಕ್ಕೆ ಹೋದಾಗ ದೇವಸ್ಥಾನಗಳಿಗೆ ಹೋಗದಿದ್ದರೆ ನಮ್ಮ ಬಗ್ಗೆ ಬೇರೆಯದೇ ರೀತಿಯ ಕತೆ ಕಟ್ಟುತ್ತಾರೆ ಎಂದು ಹೇಳಿದರು.

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದೇ ಹೋದರೆ ಕೇವಲ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ. ಈ ಕಾರಣಕ್ಕೇ ಮೌಢ್ಯ ನಿಷೇಧ ಕಾಯ್ದೆ ಪರಿಣಾಮಕಾರಿ ಆಗುವುದಿಲ್ಲ. ನಾವು ಏನೇ ಕಾನೂನು, ನಿಯಮ ಮಾಡಿದರೂ ಸಂವಿಧಾನದ ಚೌಕಟ್ಟಿಗೇ ಒಳಪಟ್ಟಿರಬೇಕು ಎಂದು ತಿಳಿಸಿದರು.

“ಗುಡಿ, ಚರ್ಚು, ಮಸೀದಿಗಳನ್ನು ಬಿಟ್ಟು ಹೊರ ಬನ್ನಿ, ಬಡತನದ ಬೇರುಗಳ ಬುಡ ಸಮೇತ ಕಿತ್ತು ಹಾಕಲು ಬನ್ನಿ” ಎಂದು ಕುವೆಂಪು ಅವರು ಕರೆ ನೀಡಿದ್ದರು. ಈ ಕರೆಯನ್ನು ಸಮಾಜ ಪಾಲಿಸಿದರೆ ಅಸಮಾನತೆಯ ಸಮಾಜ ಸಮಾನತೆಯ ಕಡೆ ಚಲಿಸುತ್ತದೆ. ಕುವೆಂಪು ಅವರ ಆಶಯ ಮತ್ತು ಮೌಲ್ಯಗಳು ಇಡೀ ವಿಶ್ವಕ್ಕೇ ಅನ್ವಯ ಆಗುವುದರಿಂದ ಜಗತ್ತಿನ ಇತರೆ ಭಾಷೆಗಳಿಗೂ ಈ ಕೃತಿ ಅನುವಾದವಾಗಲಿ ಎಂಬುದು ನನ್ನ ಇಂಗಿತ ಎಂದರು.

Ramesh Babu

Journalist

Recent Posts

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

25 minutes ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

5 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

9 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

10 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

11 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

21 hours ago