ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟ ಮಾಡಿದೆ.
ಮಾರ್ಚ್ 1 ರಿಂದ 19ರ ವರೆಗೆ ದ್ವೀತಿಯ ಪಿಯುಸಿ ಪರೀಕ್ಷೆಗಳು ನಡೆದರೆ, ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ. ಬಹುತೇಕ ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮವಾಗಲಿದೆ.
ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿಲಾಗಿದ್ದು, ಡಿ.16ರ ಒಳಗೆ ಆಕ್ಷೇಪಣೆಯಲ್ಲಿ ಬೋರ್ಡ್ ಸಲ್ಲಿಕೆ ಮಾಡಬಹುದಾಗಿದೆ.
ದ್ವೀತಿಯ ಪಿಯುಸಿ ಪರೀಕ್ಷೆ- ವೇಳಾಪಟ್ಟಿ
ಮಾರ್ಚ್ 1- ಕನ್ನಡ, ಅರೇಬಿಕ್.
ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
ಮಾರ್ಚ್ 8- ಹಿಂದಿ.
ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
ಮಾರ್ಚ್ 13- ಅರ್ಥಶಾಸ್ತ್ರ
ಮಾರ್ಚ್ 15- ಇಂಗ್ಲೀಷ್
ಮಾರ್ಚ್ 17- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 18- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್.
SSLC ಪರೀಕ್ಷೆ -1 ವೇಳಾಪಟ್ಟಿ
ಮಾರ್ಚ್ 20- ಪ್ರಥಮ ಭಾಷೆ ವಿಷಯಗಳು
ಮಾರ್ಚ್ 22- ಸಮಾಜ ವಿಜ್ಞಾನ
ಮಾರ್ಚ್ 24- ದ್ವಿತೀಯ ಭಾಷೆ ವಿಷಯಗಳು
ಮಾರ್ಚ್ 27- ಗಣಿತ
ಮಾರ್ಚ್ 29- ತೃತೀಯ ಭಾಷೆ ವಿಷಯಗಳು
ಏಪ್ರಿಲ್ 2- ವಿಜ್ಞಾನ
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…