50 ಕ್ಕೂ ಹೆಚ್ಚು ಗಿಡಗಳನ್ನು ಮಂಜುನಾಥ ಎಂಬಾತ ಕಡಿದು ಹಾಕಿದ್ದಾನೆ ಎಂದು ಸಂಕಷ್ಟಕ್ಕೀಡಾದ ರೈತ ಶಿವಶಂಕರ್ ಕುಟುಂಬಸ್ಥರು ಆರೋಪಿಸಿ, ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಘಟನೆ ವಿವರ
ಗಾಣದಾಳ ಗ್ರಾಮದ ಹಳ್ಳದ ಬಳಿ ರೈತ ಶಿವಶಂಕರ್ ಎಂಬುವರು ಸರ್ವೇ ನಂ. 8/1 ರಲ್ಲಿ 29 ಗುಂಟೆ ಜಮೀನನ್ನು ರಾಮಕ್ಕ ಎಂಬುವರಿಂದ ಕ್ರಯ ಮಾಡಿಸಿಕೊಳ್ಳಲಾಗಿತ್ತು. ಜಮೀನು ಪಕ್ಕದಲ್ಲೇ ನಕಾಶೆ ದಾರಿ ವಿಚಾರವಾಗಿ ಮಂಜುನಾಥ ಹಾಗೂ ನಮ್ಮ ಕುಟುಂಬದ ಮಧ್ಯೆ ಜಗಳ ನಡೆದಿತ್ತು. ಆದರೂ, ನಕಾಶೆಯಲ್ಲಿದ್ದಂತೆ ಗ್ರಾ.ಪಂ ವತಿಯಿಂದ ರಸ್ತೆ ಮಾಡಿಸಿಕೊಂಡಿದ್ದೆವು. ಒಂದು ಕಿ.ಮೀ.ದೂರದಿಂದ ಪೈಪ್ ಲೈನ್ ಮೂಲಕ ನೀರು ತಂದು ಎರಡು ವರ್ಷದ ಹಿಂದೆ ಅಡಿಕೆ ಸಸಿಗಳನ್ನು ನಾಟಿ ಮಾಡಿದ್ದೆವು. ಹಳೆಯ ದ್ವೇಷ ಇಟ್ಟುಕೊಂಡು ಸೋಮವಾರ ಸಂಜೆ ಮಂಜುನಾಥ ಎಂಬಾತ ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಾನೆ ಎಂದು ಜಮೀನು ಮಾಲೀಕ ಶಿವಶಂಕರ್ ಆರೋಪಿಸಿದ್ದಾರೆ.
ನಂತರ ಶಿವಶಂಕರ್ ಅವರ ತಾಯಿ ನರಸಮ್ಮ ಮಾತನಾಡಿ, ವಡವೆ ಅಡವಿಟ್ಟು ಐದು ಲಕ್ಷ ಸಾಲ ತಂದು ಅಡಿಕೆ ಬೆಳೆ ಬೆಳೆದಿದ್ದೆವು. ಮಂಜುನಾಥ, ನವೀನ ಅವರು ಸಣ್ಣ ಅಡಿಕೆ ಗಿಡಗಳನ್ನೇ ಕಡಿದು ನಾಶ ಮಾಡಿದ್ದಾರೆ. ನಮ್ಮ ಮಧ್ಯೆ ಏನೇ ಭಿನ್ನಾಭಿಪ್ರಾಯ ಇದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದಿತ್ತು. ಆದರೆ, ಜೀವನಕ್ಕೆ ಆಧಾರವಾಗಿದ್ದ ಅಡಿಕೆ ಸಸಿಗಳನ್ನೇ ಕತ್ತರಿಸಿ ಹಾಳು ಮಾಡಿದ್ದಾರೆ. ನಮಗೆ ನ್ಯಾಯದ ಜೊತೆ ರಕ್ಷಣೆ ಬೇಕು ಎಂದು ಅಳಲು ತೋಡಿಕೊಂಡರು.
ದೂರು, ಪ್ರತಿದೂರು ದಾಖಲು
ಅಡಿಕೆ ಸಸಿಗಳನ್ನು ಕಡಿದು ನಾಶ ಮಾಡಿದ್ದಲ್ಲದೇ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿದ ಆರೋಪದ ಮೇಲೆ ಮಂಜುನಾಥ, ನವೀನ್ ಕುಮಾರ್, ಜಯಮ್ಮ, ಮುತ್ತಯ್ಯ ಹಾಗೂ ಚಿನ್ನಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.
ಮಂಜುನಾಥ ಅವರು ಕೂಡ ಪ್ರತಿದೂರು ನೀಡಿದ್ದು, ಮಾಂಗಲ್ಯ ಸರ ಕಿತ್ತುಹಾಕಿ ಹಲ್ಲೆ ನಡೆಸಿದ ಆರೋಪದಡಿ ಶಿವಶಂಕರ್, ನರಸಮ್ಮ ಇತರರ ವಿರುದ್ಧ ದೂರು ದಾಖಲಾಗಿದೆ.
ತಾಲೂಕಿನಲ್ಲಿ ಇತ್ತೀಚೆಗೆ ದ್ವೇಷ ತುಂಬಿದ ಮನಸ್ಥಿತಿಗಳು ಮಿತಿಮೀರಿದ್ದು, ಇದರಿಂದ ರಾಗಿ ಹುಲ್ಲಿನ ಬಣವೆಗೆ ಬೆಂಕಿ ಹಚ್ಚುವುದು, ಬೆಳೆ ನಾಶ ಮಾಡುವುದು, ಬೋರ್ ವೆಲೆ ಪೈಪ್, ಕೇಬಲ್ ತುಂಡರಿಸುವುದು, ರೇಷ್ಮೇ ಗೂಡಿಗೆ ಬೆಂಕಿ ಹಚ್ಚಲಾಗುತ್ತಿದೆ. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ರೋಗಗ್ರಸ್ತ ಮನಸ್ಥಿತಿ ಇರುವ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…