ದ.ರಾ. ಬೇಂದ್ರೆಯವರ ಕಾವ್ಯವು ಕನ್ನಡ ಭಾಷೆ ಹಾಗೂ ಸಾಹಿತ್ಯದ ಅನನ್ಯತೆಯನ್ನು ಹೆಚ್ಚಿಸಿದೆ. ಬೇಂದ್ರೆಯವರ ಕಾವ್ಯದ ಮತ್ತೊಂದು ವೈಶಿಷ್ಟ್ಯ ಎಂದರೆ ಬದುಕೇ ಕಾವ್ಯವಾಗಿರುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.
ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ನಡೆದ ಡಾ.ದ.ರಾ.ಬೇಂದ್ರೆಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಸುಗಮ ಸಂಗೀತವನ್ನು ಶ್ರೀಮಂತಗೊಳ್ಳುವಲ್ಲಿ ಬೇಂದ್ರೆಯವರ ಗೀತೆಗಳು ಪ್ರಮುಖ ಪಾತ್ರವಹಿಸಿವೆ. ಜೀವನಪ್ರೀತಿ, ಮಾನವೀಯ ಅಂತಃಕರಣ ಮೊದಲಾದ ಮೌಲ್ಯಗಳನ್ನು ಪ್ರತಿಪಾದಿಸುವ ಬೇಂದ್ರೆಯವರ ಭಾವಗೀತೆಗಳು ಸಾಮಾಜಿಕ ಸ್ವಾಸ್ಥ್ಯಕ್ಕೆ ಸಹಕಾರಿಯಾಗಿವೆ ಎಂದರು.
ಕಾವ್ಯವಾಚನದಲ್ಲಂತೂ ಬೇಂದ್ರೆಯವರದು ಅಸದೃಶವಾದ ಸೃಜನಶೀಲ ಪ್ರತಿಭೆ. ಬೇಂದ್ರೆಯವರ ವ್ಯಕ್ತಿತ್ವ ಕನ್ನಡಿಗರ ಮೇಲೆ ಪ್ರಭಾವ ಬೀರಿದ್ದೆ ಅವರ ಕಾವ್ಯದ ವಾಚನದ ಮೂಲಕ ಎನ್ನಬಹುದು. ಅವರ ಭಾವಗೀತೆಗಳು, ಗೀತೆಗಳು ಯುವ ಕವಿಗಳಿಗೆ ಸದಾ ಸ್ಪೂರ್ತಿದಾಯಕವಾಗಿವೆ. ಕನ್ನಡಕ್ಕೆ ಜ್ಞಾನಪೀಠದ ಗರಿಯನ್ನು ತಂದುಕೊಟ್ಟ ಬೇಂದ್ರೆಯವರು ಕನ್ನಡಿಗರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕಿ ಸಿ.ನಿರ್ಮಲ ಮಾತನಾಡಿ, ಮಕ್ಕಳು ಭಾವಗೀತೆಗಳನ್ನು ಹಾಡುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಗಾಯನ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ವಿಫುಲ ಅವಕಾಶಗಳಿವೆ. ಈ ಸದಾವಕಾಶವನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ದ.ರಾ.ಬೇಂದ್ರೆ ವಿರಚಿತ ಗೀತೆಗಳನ್ನು ಹಾಡುವ ಮೂಲಕ ವರಕವಿಗೆ ಗೀತನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…