ದ.ರಾ. ಬೇಂದ್ರೆಯವರ ಕಾವ್ಯವು ಕನ್ನಡ ಭಾಷೆ ಹಾಗೂ ಸಾಹಿತ್ಯದ ಅನನ್ಯತೆಯನ್ನು ಹೆಚ್ಚಿಸಿದೆ. ಬೇಂದ್ರೆಯವರ ಕಾವ್ಯದ ಮತ್ತೊಂದು ವೈಶಿಷ್ಟ್ಯ ಎಂದರೆ ಬದುಕೇ ಕಾವ್ಯವಾಗಿರುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.
ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ನಡೆದ ಡಾ.ದ.ರಾ.ಬೇಂದ್ರೆಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಸುಗಮ ಸಂಗೀತವನ್ನು ಶ್ರೀಮಂತಗೊಳ್ಳುವಲ್ಲಿ ಬೇಂದ್ರೆಯವರ ಗೀತೆಗಳು ಪ್ರಮುಖ ಪಾತ್ರವಹಿಸಿವೆ. ಜೀವನಪ್ರೀತಿ, ಮಾನವೀಯ ಅಂತಃಕರಣ ಮೊದಲಾದ ಮೌಲ್ಯಗಳನ್ನು ಪ್ರತಿಪಾದಿಸುವ ಬೇಂದ್ರೆಯವರ ಭಾವಗೀತೆಗಳು ಸಾಮಾಜಿಕ ಸ್ವಾಸ್ಥ್ಯಕ್ಕೆ ಸಹಕಾರಿಯಾಗಿವೆ ಎಂದರು.
ಕಾವ್ಯವಾಚನದಲ್ಲಂತೂ ಬೇಂದ್ರೆಯವರದು ಅಸದೃಶವಾದ ಸೃಜನಶೀಲ ಪ್ರತಿಭೆ. ಬೇಂದ್ರೆಯವರ ವ್ಯಕ್ತಿತ್ವ ಕನ್ನಡಿಗರ ಮೇಲೆ ಪ್ರಭಾವ ಬೀರಿದ್ದೆ ಅವರ ಕಾವ್ಯದ ವಾಚನದ ಮೂಲಕ ಎನ್ನಬಹುದು. ಅವರ ಭಾವಗೀತೆಗಳು, ಗೀತೆಗಳು ಯುವ ಕವಿಗಳಿಗೆ ಸದಾ ಸ್ಪೂರ್ತಿದಾಯಕವಾಗಿವೆ. ಕನ್ನಡಕ್ಕೆ ಜ್ಞಾನಪೀಠದ ಗರಿಯನ್ನು ತಂದುಕೊಟ್ಟ ಬೇಂದ್ರೆಯವರು ಕನ್ನಡಿಗರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕಿ ಸಿ.ನಿರ್ಮಲ ಮಾತನಾಡಿ, ಮಕ್ಕಳು ಭಾವಗೀತೆಗಳನ್ನು ಹಾಡುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಗಾಯನ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ವಿಫುಲ ಅವಕಾಶಗಳಿವೆ. ಈ ಸದಾವಕಾಶವನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ದ.ರಾ.ಬೇಂದ್ರೆ ವಿರಚಿತ ಗೀತೆಗಳನ್ನು ಹಾಡುವ ಮೂಲಕ ವರಕವಿಗೆ ಗೀತನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…