ದ.ರಾ. ಬೇಂದ್ರೆಯವರ ಕಾವ್ಯವು ಕನ್ನಡ ಭಾಷೆ ಹಾಗೂ ಸಾಹಿತ್ಯದ ಅನನ್ಯತೆಯನ್ನು ಹೆಚ್ಚಿಸಿದೆ. ಬೇಂದ್ರೆಯವರ ಕಾವ್ಯದ ಮತ್ತೊಂದು ವೈಶಿಷ್ಟ್ಯ ಎಂದರೆ ಬದುಕೇ ಕಾವ್ಯವಾಗಿರುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.
ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ನಡೆದ ಡಾ.ದ.ರಾ.ಬೇಂದ್ರೆಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಸುಗಮ ಸಂಗೀತವನ್ನು ಶ್ರೀಮಂತಗೊಳ್ಳುವಲ್ಲಿ ಬೇಂದ್ರೆಯವರ ಗೀತೆಗಳು ಪ್ರಮುಖ ಪಾತ್ರವಹಿಸಿವೆ. ಜೀವನಪ್ರೀತಿ, ಮಾನವೀಯ ಅಂತಃಕರಣ ಮೊದಲಾದ ಮೌಲ್ಯಗಳನ್ನು ಪ್ರತಿಪಾದಿಸುವ ಬೇಂದ್ರೆಯವರ ಭಾವಗೀತೆಗಳು ಸಾಮಾಜಿಕ ಸ್ವಾಸ್ಥ್ಯಕ್ಕೆ ಸಹಕಾರಿಯಾಗಿವೆ ಎಂದರು.
ಕಾವ್ಯವಾಚನದಲ್ಲಂತೂ ಬೇಂದ್ರೆಯವರದು ಅಸದೃಶವಾದ ಸೃಜನಶೀಲ ಪ್ರತಿಭೆ. ಬೇಂದ್ರೆಯವರ ವ್ಯಕ್ತಿತ್ವ ಕನ್ನಡಿಗರ ಮೇಲೆ ಪ್ರಭಾವ ಬೀರಿದ್ದೆ ಅವರ ಕಾವ್ಯದ ವಾಚನದ ಮೂಲಕ ಎನ್ನಬಹುದು. ಅವರ ಭಾವಗೀತೆಗಳು, ಗೀತೆಗಳು ಯುವ ಕವಿಗಳಿಗೆ ಸದಾ ಸ್ಪೂರ್ತಿದಾಯಕವಾಗಿವೆ. ಕನ್ನಡಕ್ಕೆ ಜ್ಞಾನಪೀಠದ ಗರಿಯನ್ನು ತಂದುಕೊಟ್ಟ ಬೇಂದ್ರೆಯವರು ಕನ್ನಡಿಗರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕಿ ಸಿ.ನಿರ್ಮಲ ಮಾತನಾಡಿ, ಮಕ್ಕಳು ಭಾವಗೀತೆಗಳನ್ನು ಹಾಡುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಗಾಯನ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ವಿಫುಲ ಅವಕಾಶಗಳಿವೆ. ಈ ಸದಾವಕಾಶವನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ದ.ರಾ.ಬೇಂದ್ರೆ ವಿರಚಿತ ಗೀತೆಗಳನ್ನು ಹಾಡುವ ಮೂಲಕ ವರಕವಿಗೆ ಗೀತನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…