ದ.ರಾ. ಬೇಂದ್ರೆಯವರ ಕಾವ್ಯವು ಕನ್ನಡ ಭಾಷೆ ಹಾಗೂ ಸಾಹಿತ್ಯದ ಅನನ್ಯತೆಯನ್ನು ಹೆಚ್ಚಿಸಿದೆ. ಬೇಂದ್ರೆಯವರ ಕಾವ್ಯದ ಮತ್ತೊಂದು ವೈಶಿಷ್ಟ್ಯ ಎಂದರೆ ಬದುಕೇ ಕಾವ್ಯವಾಗಿರುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.
ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ನಡೆದ ಡಾ.ದ.ರಾ.ಬೇಂದ್ರೆಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಸುಗಮ ಸಂಗೀತವನ್ನು ಶ್ರೀಮಂತಗೊಳ್ಳುವಲ್ಲಿ ಬೇಂದ್ರೆಯವರ ಗೀತೆಗಳು ಪ್ರಮುಖ ಪಾತ್ರವಹಿಸಿವೆ. ಜೀವನಪ್ರೀತಿ, ಮಾನವೀಯ ಅಂತಃಕರಣ ಮೊದಲಾದ ಮೌಲ್ಯಗಳನ್ನು ಪ್ರತಿಪಾದಿಸುವ ಬೇಂದ್ರೆಯವರ ಭಾವಗೀತೆಗಳು ಸಾಮಾಜಿಕ ಸ್ವಾಸ್ಥ್ಯಕ್ಕೆ ಸಹಕಾರಿಯಾಗಿವೆ ಎಂದರು.
ಕಾವ್ಯವಾಚನದಲ್ಲಂತೂ ಬೇಂದ್ರೆಯವರದು ಅಸದೃಶವಾದ ಸೃಜನಶೀಲ ಪ್ರತಿಭೆ. ಬೇಂದ್ರೆಯವರ ವ್ಯಕ್ತಿತ್ವ ಕನ್ನಡಿಗರ ಮೇಲೆ ಪ್ರಭಾವ ಬೀರಿದ್ದೆ ಅವರ ಕಾವ್ಯದ ವಾಚನದ ಮೂಲಕ ಎನ್ನಬಹುದು. ಅವರ ಭಾವಗೀತೆಗಳು, ಗೀತೆಗಳು ಯುವ ಕವಿಗಳಿಗೆ ಸದಾ ಸ್ಪೂರ್ತಿದಾಯಕವಾಗಿವೆ. ಕನ್ನಡಕ್ಕೆ ಜ್ಞಾನಪೀಠದ ಗರಿಯನ್ನು ತಂದುಕೊಟ್ಟ ಬೇಂದ್ರೆಯವರು ಕನ್ನಡಿಗರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕಿ ಸಿ.ನಿರ್ಮಲ ಮಾತನಾಡಿ, ಮಕ್ಕಳು ಭಾವಗೀತೆಗಳನ್ನು ಹಾಡುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಗಾಯನ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ವಿಫುಲ ಅವಕಾಶಗಳಿವೆ. ಈ ಸದಾವಕಾಶವನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ದ.ರಾ.ಬೇಂದ್ರೆ ವಿರಚಿತ ಗೀತೆಗಳನ್ನು ಹಾಡುವ ಮೂಲಕ ವರಕವಿಗೆ ಗೀತನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…