ದ.ರಾ. ಬೇಂದ್ರೆಯವರ ಕಾವ್ಯವು ಕನ್ನಡ ಭಾಷೆ ಹಾಗೂ ಸಾಹಿತ್ಯದ ಅನನ್ಯತೆಯನ್ನು ಹೆಚ್ಚಿಸಿದೆ-  ಜಿ.ಸುರೇಶ್

ದ.ರಾ. ಬೇಂದ್ರೆಯವರ ಕಾವ್ಯವು ಕನ್ನಡ ಭಾಷೆ ಹಾಗೂ ಸಾಹಿತ್ಯದ ಅನನ್ಯತೆಯನ್ನು ಹೆಚ್ಚಿಸಿದೆ. ಬೇಂದ್ರೆಯವರ ಕಾವ್ಯದ ಮತ್ತೊಂದು ವೈಶಿಷ್ಟ್ಯ ಎಂದರೆ ಬದುಕೇ ಕಾವ್ಯವಾಗಿರುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ  ಜಿ.ಸುರೇಶ್     ತಿಳಿಸಿದರು.

ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು  ಸಹಯೋಗದಲ್ಲಿ ನಡೆದ     ಡಾ.ದ.ರಾ.ಬೇಂದ್ರೆಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಸುಗಮ ಸಂಗೀತವನ್ನು ಶ್ರೀಮಂತಗೊಳ್ಳುವಲ್ಲಿ  ಬೇಂದ್ರೆಯವರ ಗೀತೆಗಳು ಪ್ರಮುಖ ಪಾತ್ರವಹಿಸಿವೆ.  ಜೀವನಪ್ರೀತಿ, ಮಾನವೀಯ ಅಂತಃಕರಣ ಮೊದಲಾದ ಮೌಲ್ಯಗಳನ್ನು ಪ್ರತಿಪಾದಿಸುವ ಬೇಂದ್ರೆಯವರ ಭಾವಗೀತೆಗಳು ಸಾಮಾಜಿಕ ಸ್ವಾಸ್ಥ್ಯಕ್ಕೆ ಸಹಕಾರಿಯಾಗಿವೆ ಎಂದರು.

ಕಾವ್ಯವಾಚನದಲ್ಲಂತೂ ಬೇಂದ್ರೆಯವರದು ಅಸದೃಶವಾದ ಸೃಜನಶೀಲ ಪ್ರತಿಭೆ. ಬೇಂದ್ರೆಯವರ ವ್ಯಕ್ತಿತ್ವ ಕನ್ನಡಿಗರ ಮೇಲೆ ಪ್ರಭಾವ ಬೀರಿದ್ದೆ ಅವರ ಕಾವ್ಯದ ವಾಚನದ ಮೂಲಕ ಎನ್ನಬಹುದು. ಅವರ ಭಾವಗೀತೆಗಳು, ಗೀತೆಗಳು ಯುವ ಕವಿಗಳಿಗೆ ಸದಾ ಸ್ಪೂರ್ತಿದಾಯಕವಾಗಿವೆ.  ಕನ್ನಡಕ್ಕೆ ಜ್ಞಾನಪೀಠದ ಗರಿಯನ್ನು ತಂದುಕೊಟ್ಟ ಬೇಂದ್ರೆಯವರು ಕನ್ನಡಿಗರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕಿ ಸಿ.ನಿರ್ಮಲ ಮಾತನಾಡಿ,  ಮಕ್ಕಳು ಭಾವಗೀತೆಗಳನ್ನು ಹಾಡುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಗಾಯನ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ವಿಫುಲ ಅವಕಾಶಗಳಿವೆ. ಈ ಸದಾವಕಾಶವನ್ನು    ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು     ದ.ರಾ.ಬೇಂದ್ರೆ ವಿರಚಿತ ಗೀತೆಗಳನ್ನು ಹಾಡುವ ಮೂಲಕ ವರಕವಿಗೆ ಗೀತನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

4 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

6 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

9 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago