ದ.ರಾ. ಬೇಂದ್ರೆಯವರ ಕಾವ್ಯವು ಕನ್ನಡ ಭಾಷೆ ಹಾಗೂ ಸಾಹಿತ್ಯದ ಅನನ್ಯತೆಯನ್ನು ಹೆಚ್ಚಿಸಿದೆ. ಬೇಂದ್ರೆಯವರ ಕಾವ್ಯದ ಮತ್ತೊಂದು ವೈಶಿಷ್ಟ್ಯ ಎಂದರೆ ಬದುಕೇ ಕಾವ್ಯವಾಗಿರುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.
ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ನಡೆದ ಡಾ.ದ.ರಾ.ಬೇಂದ್ರೆಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಸುಗಮ ಸಂಗೀತವನ್ನು ಶ್ರೀಮಂತಗೊಳ್ಳುವಲ್ಲಿ ಬೇಂದ್ರೆಯವರ ಗೀತೆಗಳು ಪ್ರಮುಖ ಪಾತ್ರವಹಿಸಿವೆ. ಜೀವನಪ್ರೀತಿ, ಮಾನವೀಯ ಅಂತಃಕರಣ ಮೊದಲಾದ ಮೌಲ್ಯಗಳನ್ನು ಪ್ರತಿಪಾದಿಸುವ ಬೇಂದ್ರೆಯವರ ಭಾವಗೀತೆಗಳು ಸಾಮಾಜಿಕ ಸ್ವಾಸ್ಥ್ಯಕ್ಕೆ ಸಹಕಾರಿಯಾಗಿವೆ ಎಂದರು.
ಕಾವ್ಯವಾಚನದಲ್ಲಂತೂ ಬೇಂದ್ರೆಯವರದು ಅಸದೃಶವಾದ ಸೃಜನಶೀಲ ಪ್ರತಿಭೆ. ಬೇಂದ್ರೆಯವರ ವ್ಯಕ್ತಿತ್ವ ಕನ್ನಡಿಗರ ಮೇಲೆ ಪ್ರಭಾವ ಬೀರಿದ್ದೆ ಅವರ ಕಾವ್ಯದ ವಾಚನದ ಮೂಲಕ ಎನ್ನಬಹುದು. ಅವರ ಭಾವಗೀತೆಗಳು, ಗೀತೆಗಳು ಯುವ ಕವಿಗಳಿಗೆ ಸದಾ ಸ್ಪೂರ್ತಿದಾಯಕವಾಗಿವೆ. ಕನ್ನಡಕ್ಕೆ ಜ್ಞಾನಪೀಠದ ಗರಿಯನ್ನು ತಂದುಕೊಟ್ಟ ಬೇಂದ್ರೆಯವರು ಕನ್ನಡಿಗರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕಿ ಸಿ.ನಿರ್ಮಲ ಮಾತನಾಡಿ, ಮಕ್ಕಳು ಭಾವಗೀತೆಗಳನ್ನು ಹಾಡುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಗಾಯನ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ವಿಫುಲ ಅವಕಾಶಗಳಿವೆ. ಈ ಸದಾವಕಾಶವನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ದ.ರಾ.ಬೇಂದ್ರೆ ವಿರಚಿತ ಗೀತೆಗಳನ್ನು ಹಾಡುವ ಮೂಲಕ ವರಕವಿಗೆ ಗೀತನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…