ದ.ರಾ. ಬೇಂದ್ರೆಯವರ ಕಾವ್ಯವು ಕನ್ನಡ ಭಾಷೆ ಹಾಗೂ ಸಾಹಿತ್ಯದ ಅನನ್ಯತೆಯನ್ನು ಹೆಚ್ಚಿಸಿದೆ. ಬೇಂದ್ರೆಯವರ ಕಾವ್ಯದ ಮತ್ತೊಂದು ವೈಶಿಷ್ಟ್ಯ ಎಂದರೆ ಬದುಕೇ ಕಾವ್ಯವಾಗಿರುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.
ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ನಡೆದ ಡಾ.ದ.ರಾ.ಬೇಂದ್ರೆಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಸುಗಮ ಸಂಗೀತವನ್ನು ಶ್ರೀಮಂತಗೊಳ್ಳುವಲ್ಲಿ ಬೇಂದ್ರೆಯವರ ಗೀತೆಗಳು ಪ್ರಮುಖ ಪಾತ್ರವಹಿಸಿವೆ. ಜೀವನಪ್ರೀತಿ, ಮಾನವೀಯ ಅಂತಃಕರಣ ಮೊದಲಾದ ಮೌಲ್ಯಗಳನ್ನು ಪ್ರತಿಪಾದಿಸುವ ಬೇಂದ್ರೆಯವರ ಭಾವಗೀತೆಗಳು ಸಾಮಾಜಿಕ ಸ್ವಾಸ್ಥ್ಯಕ್ಕೆ ಸಹಕಾರಿಯಾಗಿವೆ ಎಂದರು.
ಕಾವ್ಯವಾಚನದಲ್ಲಂತೂ ಬೇಂದ್ರೆಯವರದು ಅಸದೃಶವಾದ ಸೃಜನಶೀಲ ಪ್ರತಿಭೆ. ಬೇಂದ್ರೆಯವರ ವ್ಯಕ್ತಿತ್ವ ಕನ್ನಡಿಗರ ಮೇಲೆ ಪ್ರಭಾವ ಬೀರಿದ್ದೆ ಅವರ ಕಾವ್ಯದ ವಾಚನದ ಮೂಲಕ ಎನ್ನಬಹುದು. ಅವರ ಭಾವಗೀತೆಗಳು, ಗೀತೆಗಳು ಯುವ ಕವಿಗಳಿಗೆ ಸದಾ ಸ್ಪೂರ್ತಿದಾಯಕವಾಗಿವೆ. ಕನ್ನಡಕ್ಕೆ ಜ್ಞಾನಪೀಠದ ಗರಿಯನ್ನು ತಂದುಕೊಟ್ಟ ಬೇಂದ್ರೆಯವರು ಕನ್ನಡಿಗರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕಿ ಸಿ.ನಿರ್ಮಲ ಮಾತನಾಡಿ, ಮಕ್ಕಳು ಭಾವಗೀತೆಗಳನ್ನು ಹಾಡುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಗಾಯನ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ವಿಫುಲ ಅವಕಾಶಗಳಿವೆ. ಈ ಸದಾವಕಾಶವನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ದ.ರಾ.ಬೇಂದ್ರೆ ವಿರಚಿತ ಗೀತೆಗಳನ್ನು ಹಾಡುವ ಮೂಲಕ ವರಕವಿಗೆ ಗೀತನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…