ಧಗ ಧಗ ಉರಿದು ಸುಟ್ಟು ಭಸ್ಮವಾದ ಹುಲ್ಲಿನ ಬಣವೆ: ಸುಮಾರು 70 ಸಾವಿರ ಮೌಲ್ಯದ 270 ಹುಲ್ಲಿನ ಹೊರೆ ಬೆಂಕಿಗಾಹುತಿ: ಸ್ಥಳದಲ್ಲಿ ಪೆಟ್ರೋಲ್ ತಂದಿದ್ದ ಬಾಟಲ್ ಪತ್ತೆ

ಕಿಡಿಗೇಡಿಗಳ ಕೃತ್ಯಕ್ಕೆ ಸುಮಾರು 70 ಸಾವಿರ ಮೌಲ್ಯದ 270 ಹುಲ್ಲಿನ ಹೊರೆಗಳ ಬಣವೆ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಗಡ್ಡಂಬಚ್ಚಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳ‌ ಹಿಂದೆ ನಡೆದಿದೆ.‌ ಘಟನೆ  ತಡವಾಗಿ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಅಗ್ನಿ ಶಾಮಕ‌ ಸಿಬ್ಬಂದಿ ದೌಡಾಯಿಸಿ ಬೆಂಕಿ‌‌‌ನಂದಿಸುವ ಪ್ರಯತ್ನ‌ ಮಾಡಿದ್ದರೂ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ.

ರೈತ ಮಂಜುನಾಥ್ ಅವರಿಗೆ ಸೇರಿದ ಹುಲ್ಲಿನ ಬಣವೆ ಸುಟ್ಟು ಕರಕಲಾಗಿದೆ. ಜಾನುವಾರುಗಳಿಗೆ ಶೇಖರಿಸಿದ್ದ ಹುಲ್ಲಿನ ಬಣವೆ ಕಳೆದುಕೊಂಡ‌ ರೈತ ಕಂಗಾಲಾಗಿದ್ದಾನೆ. ಸ್ಥಳದಲ್ಲಿ ಪೆಟ್ರೋಲ್ ತಂದಿದ್ದ ಬಾಟಲ್ ಪತ್ತೆ ಕೂಡ ಪತ್ತೆಯಾಗಿದೆ. ಈ ಹಿನ್ನೆಲೆ ಯಾರೋ ಕಿಡಿಗೇಡಿಗಳು ಬೇಕಂತಲೇ ಹುಲ್ಲಿನ ಬಣವೆಗೆ ಕಿಡಿ‌ಹಚ್ಚಿದ್ದಾರೆ ಎಂಬ ಶಂಕೆ‌ ವ್ಯಕ್ತವಾಗಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇತ್ತೀಚಿಗೆ  ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಕುಂಟೆ ಗ್ರಾಮದಲ್ಲಿ ಬಡತನದಲ್ಲೂ ಲಕ್ಷಾಂತರ ರೂ. ವ್ಯಯ ಮಾಡಿ ರೇಷ್ಮೆ ಗೂಡು ಸಾಕಿದ್ದ‌ ಬಡ ಕುಟುಂಬ. ಇನ್ನೇನು ಒಂದೆರೆಡು ದಿನದಲ್ಲಿ ರೇಷ್ಮೆ ಗೂಡನ್ನ ಮಾರುಕಟ್ಟೆಗೆ ಹಾಕುವಷ್ಟರಲ್ಲಿ, ರಾತ್ರೋರಾತ್ರಿ ರೇಷ್ಮೆ ಗೂಡು ಇದ್ದ ಮನೆ ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಸಂಪೂರ್ಣ ಭಸ್ಮವಾಗಿತ್ತು. ಅದೇರೀತಿ ಕಾಡುಕುಂಟೆ ಗ್ರಾಮದ ಘಟನೆ ಮಾಸುವ ಮುನ್ನವೇ ಕುಕ್ಕಲಹಳ್ಳಿ ಗ್ರಾಮದಲ್ಲಿ ಹಾಡಹಗಲೇ ಸುಮಾರು 8-10 ಲೋಡ್ ಜೋಳದ‌ ಮೇವಿನ ಬಣವೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಸುಟ್ಟು ಕರಕಲಾಗಿದೆ. ತಾಲೂಕಿನಲ್ಲಿ ಇಂತಹ ಕುಕೃತ್ಯಗಳು ಮರುಕಳಿಸುತ್ತಿವೆ‌.

ಇಂತಹ ಕೃತ್ಯಗಳು ತಾಲೂಕಿನಲ್ಲಿ ಪದೇ ಪದೇ ಮರುಕಳಿಸುತ್ತಿವೆ. ಇದರಿಂದ ರೈತರು ಸಾಕಷ್ಟು‌ ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಇದರಲ್ಲಿ ಭಾಗಿಯಾಗುತ್ತಿರುವ ಕಿಡಿಗೇಡಿಗಳನ್ನ ಪತ್ತೆ ಹಚ್ಚಿ ಕಾನೂನು ಶಿಕ್ಷೆಗೆ ಒಳಪಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

6 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

17 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

18 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

18 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

21 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

24 hours ago