ಕಿಡಿಗೇಡಿಗಳ ಕೃತ್ಯಕ್ಕೆ ಸುಮಾರು 70 ಸಾವಿರ ಮೌಲ್ಯದ 270 ಹುಲ್ಲಿನ ಹೊರೆಗಳ ಬಣವೆ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಗಡ್ಡಂಬಚ್ಚಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರೈತ ಮಂಜುನಾಥ್ ಅವರಿಗೆ ಸೇರಿದ ಹುಲ್ಲಿನ ಬಣವೆ ಸುಟ್ಟು ಕರಕಲಾಗಿದೆ. ಜಾನುವಾರುಗಳಿಗೆ ಶೇಖರಿಸಿದ್ದ ಹುಲ್ಲಿನ ಬಣವೆ ಕಳೆದುಕೊಂಡ ರೈತ ಕಂಗಾಲಾಗಿದ್ದಾನೆ. ಸ್ಥಳದಲ್ಲಿ ಪೆಟ್ರೋಲ್ ತಂದಿದ್ದ ಬಾಟಲ್ ಪತ್ತೆ ಕೂಡ ಪತ್ತೆಯಾಗಿದೆ. ಈ ಹಿನ್ನೆಲೆ ಯಾರೋ ಕಿಡಿಗೇಡಿಗಳು ಬೇಕಂತಲೇ ಹುಲ್ಲಿನ ಬಣವೆಗೆ ಕಿಡಿಹಚ್ಚಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇಂತಹ ಕೃತ್ಯಗಳು ತಾಲೂಕಿನಲ್ಲಿ ಪದೇ ಪದೇ ಮರುಕಳಿಸುತ್ತಿವೆ. ಇದರಿಂದ ರೈತರು ಸಾಕಷ್ಟು ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಇದರಲ್ಲಿ ಭಾಗಿಯಾಗುತ್ತಿರುವ ಕಿಡಿಗೇಡಿಗಳನ್ನ ಪತ್ತೆ ಹಚ್ಚಿ ಕಾನೂನು ಶಿಕ್ಷೆಗೆ ಒಳಪಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…