ಧಗ ಧಗ ಉರಿದು ಸುಟ್ಟು ಭಸ್ಮವಾದ ಹುಲ್ಲಿನ ಬಣವೆ: ಸುಮಾರು 70 ಸಾವಿರ ಮೌಲ್ಯದ 270 ಹುಲ್ಲಿನ ಹೊರೆ ಬೆಂಕಿಗಾಹುತಿ: ಸ್ಥಳದಲ್ಲಿ ಪೆಟ್ರೋಲ್ ತಂದಿದ್ದ ಬಾಟಲ್ ಪತ್ತೆ

ಕಿಡಿಗೇಡಿಗಳ ಕೃತ್ಯಕ್ಕೆ ಸುಮಾರು 70 ಸಾವಿರ ಮೌಲ್ಯದ 270 ಹುಲ್ಲಿನ ಹೊರೆಗಳ ಬಣವೆ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಗಡ್ಡಂಬಚ್ಚಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳ‌ ಹಿಂದೆ ನಡೆದಿದೆ.‌ ಘಟನೆ  ತಡವಾಗಿ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಅಗ್ನಿ ಶಾಮಕ‌ ಸಿಬ್ಬಂದಿ ದೌಡಾಯಿಸಿ ಬೆಂಕಿ‌‌‌ನಂದಿಸುವ ಪ್ರಯತ್ನ‌ ಮಾಡಿದ್ದರೂ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ.

ರೈತ ಮಂಜುನಾಥ್ ಅವರಿಗೆ ಸೇರಿದ ಹುಲ್ಲಿನ ಬಣವೆ ಸುಟ್ಟು ಕರಕಲಾಗಿದೆ. ಜಾನುವಾರುಗಳಿಗೆ ಶೇಖರಿಸಿದ್ದ ಹುಲ್ಲಿನ ಬಣವೆ ಕಳೆದುಕೊಂಡ‌ ರೈತ ಕಂಗಾಲಾಗಿದ್ದಾನೆ. ಸ್ಥಳದಲ್ಲಿ ಪೆಟ್ರೋಲ್ ತಂದಿದ್ದ ಬಾಟಲ್ ಪತ್ತೆ ಕೂಡ ಪತ್ತೆಯಾಗಿದೆ. ಈ ಹಿನ್ನೆಲೆ ಯಾರೋ ಕಿಡಿಗೇಡಿಗಳು ಬೇಕಂತಲೇ ಹುಲ್ಲಿನ ಬಣವೆಗೆ ಕಿಡಿ‌ಹಚ್ಚಿದ್ದಾರೆ ಎಂಬ ಶಂಕೆ‌ ವ್ಯಕ್ತವಾಗಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇತ್ತೀಚಿಗೆ  ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಕುಂಟೆ ಗ್ರಾಮದಲ್ಲಿ ಬಡತನದಲ್ಲೂ ಲಕ್ಷಾಂತರ ರೂ. ವ್ಯಯ ಮಾಡಿ ರೇಷ್ಮೆ ಗೂಡು ಸಾಕಿದ್ದ‌ ಬಡ ಕುಟುಂಬ. ಇನ್ನೇನು ಒಂದೆರೆಡು ದಿನದಲ್ಲಿ ರೇಷ್ಮೆ ಗೂಡನ್ನ ಮಾರುಕಟ್ಟೆಗೆ ಹಾಕುವಷ್ಟರಲ್ಲಿ, ರಾತ್ರೋರಾತ್ರಿ ರೇಷ್ಮೆ ಗೂಡು ಇದ್ದ ಮನೆ ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಸಂಪೂರ್ಣ ಭಸ್ಮವಾಗಿತ್ತು. ಅದೇರೀತಿ ಕಾಡುಕುಂಟೆ ಗ್ರಾಮದ ಘಟನೆ ಮಾಸುವ ಮುನ್ನವೇ ಕುಕ್ಕಲಹಳ್ಳಿ ಗ್ರಾಮದಲ್ಲಿ ಹಾಡಹಗಲೇ ಸುಮಾರು 8-10 ಲೋಡ್ ಜೋಳದ‌ ಮೇವಿನ ಬಣವೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಸುಟ್ಟು ಕರಕಲಾಗಿದೆ. ತಾಲೂಕಿನಲ್ಲಿ ಇಂತಹ ಕುಕೃತ್ಯಗಳು ಮರುಕಳಿಸುತ್ತಿವೆ‌.

ಇಂತಹ ಕೃತ್ಯಗಳು ತಾಲೂಕಿನಲ್ಲಿ ಪದೇ ಪದೇ ಮರುಕಳಿಸುತ್ತಿವೆ. ಇದರಿಂದ ರೈತರು ಸಾಕಷ್ಟು‌ ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಇದರಲ್ಲಿ ಭಾಗಿಯಾಗುತ್ತಿರುವ ಕಿಡಿಗೇಡಿಗಳನ್ನ ಪತ್ತೆ ಹಚ್ಚಿ ಕಾನೂನು ಶಿಕ್ಷೆಗೆ ಒಳಪಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

5 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

5 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

9 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

21 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

1 day ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

1 day ago