ಧರಣಿ ಪೋರ್ಟಲ್‌ ಸಮಸ್ಯೆ: ಜಮೀನನ್ನು “ಸೀಲಿಂಗ್ ಲ್ಯಾಂಡ್” ಪಟ್ಟಿಯಿಂದ ತೆಗೆದು ಹಾಕುವಂತೆ ಒತ್ತಾಯಿಸಿ ಹೆಡ್‌ಸ್ಟ್ಯಾಂಡ್ ಪ್ರತಿಭಟನೆ

ಧರಣಿ ಪೋರ್ಟಲ್‌ಗೆ ಸಂಬಂಧಿಸಿದ ತಮ್ಮ ಕುಟುಂಬದ ದೀರ್ಘಾವಧಿಯ ಭೂಮಿ ಸಮಸ್ಯೆಯ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ 26 ವರ್ಷದ ಯು.ಜೀವನ್ ಎಂಬ ವ್ಯಕ್ತಿಯೊಬ್ಬರು ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ    ಇಬ್ರಾಹಿಂಪಟ್ಟಣ ಮಂಡಲದ ಕಚೇರಿಯಲ್ಲಿ 30 ನಿಮಿಷಗಳ ಕಾಲ ತಲೆ ಕೆಳಗೆ ಹಾಕಿ ಕಾಲು ಮೇಲೆ ಎತ್ತಿ(ಹೆಡ್‌ಸ್ಟ್ಯಾಂಡ್) ವಿಶಿಷ್ಚವಾಗಿ ಪ್ರತಿಭಟಿಸಿದರು.

ಐಐಐಟಿ ಹೈದರಾಬಾದ್‌ನ ಪದವೀಧರ ಮತ್ತು ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನಿಂದ ಸ್ನಾತಕೋತ್ತರ ಪದವೀಧರರಾಗಿರುವ ಜೀವನ್, ಕಂದಾಯ ಅಧಿಕಾರಿಗಳಿಂದ ತ್ವರಿತವಾಗಿ ಸಮಸ್ಯೆ ಬಗೆಹರಿಯದ‌ ಕಾರಣ ಹಾಗೂ ವಿಳಂಬ, ನಿರ್ಲಕ್ಷ್ಯ ಧೋರಣೆ ಖಂಡಿಸಿ‌ ಹೊಸ‌ ವಿಧಾನದಿಂದ ಪ್ರತಿಭಟಿಸಿದರು.

ಜೀವನ್ ಅವರ ತಾಯಿ ಉಳಿಂತಲ ಜಯಸುಧಾ ಅವರು ಮೂರು ವರ್ಷಗಳಿಂದ ಮಂಗಲ್ಪಲ್ಲಿ ಗ್ರಾಮದ ತಮ್ಮ 1.32 ಎಕರೆ ಜಮೀನನ್ನು ನಿಷೇಧ ಪಟ್ಟಿಯಿಂದ ತೆಗೆದುಹಾಕುವಂತೆ ಒತ್ತಾಯಿಸುತ್ತಿದ್ದಾರೆ. 2020ರ ಸೆಪ್ಟಂಬರ್‌ನಲ್ಲಿ ಧರಣಿ ಪೋರ್ಟಲ್ ಕಾರ್ಯಾಚರಣೆಗೆ ಬಂದಾಗ ಸರ್ವೆ ಸಂಖ್ಯೆ 374 ರ ಅಡಿಯಲ್ಲಿ ಪಟ್ಟಿ ಮಾಡಲಾದ ಭೂಮಿಯನ್ನು “ಸೀಲಿಂಗ್ ಲ್ಯಾಂಡ್” ಎಂದು ಫ್ಲ್ಯಾಗ್ ಮಾಡಲಾಗಿತ್ತು. ಈ ನಡೆ ಯಾರೂ ಆ ಭೂಮಿಯನ್ನು ಬಳಸಂದತೆ ಸೂಚನೆ ನೀಡಲಾಗಿರುತ್ತದೆ.

15 ವರ್ಷಗಳ ಹಿಂದೆ ಮೆಟ್ಟು ಸೈದರೆಡ್ಡಿ ಎಂಬುವವರಿಂದ ಜಮೀನು ಖರೀದಿಸಿರುವುದಾಗಿ ಜಯಸುಧಾ ಹೇಳಿಕೊಂಡಿದ್ದಾರೆ.

ಹಲವು ಕುಂದುಕೊರತೆ ನಿವಾರಣಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಸೇರಿದಂತೆ ಇಬ್ರಾಹಿಂಪಟ್ಟಣ ಮಂಡಲ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ಹಲವು ಬಾರಿ ಭೇಟಿ ನೀಡಿದರೂ ಕುಟುಂಬದವರು ಪರಿಹಾರ ಕಂಡಿಲ್ಲ. ಅವರು ಸೇಲ್ ಡೀಡ್, ಆರ್‌ಡಿಒ ಕಚೇರಿಯಿಂದ “ಟ್ರೇಸ್ ಆಗದ” ದಾಖಲೆ ಮತ್ತು ವಕೀಲರ ಹುಡುಕಾಟ ವರದಿ ಸೇರಿದಂತೆ ಎಲ್ಲಾ ಅಗತ್ಯ ದಾಖಲೆಗಳನ್ನು ಒದಗಿಸಿದ್ದಾರೆ, ಆದರೆ, ಭೂಮಿ ನಿಷೇಧದ ಪಟ್ಟಿಯಲ್ಲಿ ಉಳಿದಿದೆ.

ಸೀಲಿಂಗ್ ಜಮೀನಿನ ಸ್ಥಿತಿಯನ್ನು ಸ್ಪಷ್ಟಪಡಿಸಲು ತಹಶೀಲ್ದಾರ್ ಆರಂಭದಲ್ಲಿ ಕಂದಾಯ ವಿಭಾಗೀಯ ಅಧಿಕಾರಿ (ಆರ್‌ಡಿಒ) ಅವರಿಂದ ದಾಖಲೆಗಳನ್ನು ಕೇಳಿದ್ದರು ಎಂದು ಜೀವನ್ ವಿವರಿಸಿದರು.

ಆದಾಗ್ಯೂ, ಇಷ್ಟೆಲ್ಲಾ ಪ್ರಯತ್ನಗಳು ನಡೆದರೂ ಸಮಸ್ಯೆ ಪರಿಹಾರಕ್ಕೆ ಇನ್ನೂ ಒಂದು ತಿಂಗಳು ಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ. ಧರಣಿ ಪೋರ್ಟಲ್ ಸಮಸ್ಯೆಗಳನ್ನು 10 ದಿನಗಳಲ್ಲಿ ಪರಿಹರಿಸುವಂತೆ ರಾಜ್ಯ ಸರ್ಕಾರವು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ, ಆದರೆ ಇನ್ನೂ ಒಂದು ತಿಂಗಳು ಕಾಯುವಂತೆ ನಮ್ಮನ್ನು ಕೇಳಲಾಗುತ್ತಿದೆ ಎಂದು ಜೀವನ್ ಅವರ ಸಹೋದರ ಜಯಪ್ರಕಾಶ್ ಹೇಳಿದರು.

ರಂಗಾ ರೆಡ್ಡಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಧರಣಿ ಕುಂದುಕೊರತೆಗಳು ಬಗೆಹರಿಯದಿದ್ದು, ತೆಲಂಗಾಣದಲ್ಲಿ ಭೂ ದಾಖಲೆಗಳ ನಿರ್ವಹಣೆಯನ್ನು ಸುವ್ಯವಸ್ಥಿತಗೊಳಿಸಲು ಪರಿಚಯಿಸಲಾದ ಧರಣಿ ವ್ಯವಸ್ಥೆಯಡಿ ಭೂ ಸಮಸ್ಯೆಗಳನ್ನು ಪರಿಹರಿಸುವ ನಿಧಾನಗತಿಯ ಬಗ್ಗೆ ಜೀವನ್ ಅವರ ಪ್ರತಿಭಟನೆಯು ಗಮನ ಸೆಳೆದಿದೆ.

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 minutes ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

13 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

15 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

15 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

17 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago