ಧರಣಿ ಪೋರ್ಟಲ್‌ ಸಮಸ್ಯೆ: ಜಮೀನನ್ನು “ಸೀಲಿಂಗ್ ಲ್ಯಾಂಡ್” ಪಟ್ಟಿಯಿಂದ ತೆಗೆದು ಹಾಕುವಂತೆ ಒತ್ತಾಯಿಸಿ ಹೆಡ್‌ಸ್ಟ್ಯಾಂಡ್ ಪ್ರತಿಭಟನೆ

ಧರಣಿ ಪೋರ್ಟಲ್‌ಗೆ ಸಂಬಂಧಿಸಿದ ತಮ್ಮ ಕುಟುಂಬದ ದೀರ್ಘಾವಧಿಯ ಭೂಮಿ ಸಮಸ್ಯೆಯ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ 26 ವರ್ಷದ ಯು.ಜೀವನ್ ಎಂಬ ವ್ಯಕ್ತಿಯೊಬ್ಬರು ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ    ಇಬ್ರಾಹಿಂಪಟ್ಟಣ ಮಂಡಲದ ಕಚೇರಿಯಲ್ಲಿ 30 ನಿಮಿಷಗಳ ಕಾಲ ತಲೆ ಕೆಳಗೆ ಹಾಕಿ ಕಾಲು ಮೇಲೆ ಎತ್ತಿ(ಹೆಡ್‌ಸ್ಟ್ಯಾಂಡ್) ವಿಶಿಷ್ಚವಾಗಿ ಪ್ರತಿಭಟಿಸಿದರು.

ಐಐಐಟಿ ಹೈದರಾಬಾದ್‌ನ ಪದವೀಧರ ಮತ್ತು ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನಿಂದ ಸ್ನಾತಕೋತ್ತರ ಪದವೀಧರರಾಗಿರುವ ಜೀವನ್, ಕಂದಾಯ ಅಧಿಕಾರಿಗಳಿಂದ ತ್ವರಿತವಾಗಿ ಸಮಸ್ಯೆ ಬಗೆಹರಿಯದ‌ ಕಾರಣ ಹಾಗೂ ವಿಳಂಬ, ನಿರ್ಲಕ್ಷ್ಯ ಧೋರಣೆ ಖಂಡಿಸಿ‌ ಹೊಸ‌ ವಿಧಾನದಿಂದ ಪ್ರತಿಭಟಿಸಿದರು.

ಜೀವನ್ ಅವರ ತಾಯಿ ಉಳಿಂತಲ ಜಯಸುಧಾ ಅವರು ಮೂರು ವರ್ಷಗಳಿಂದ ಮಂಗಲ್ಪಲ್ಲಿ ಗ್ರಾಮದ ತಮ್ಮ 1.32 ಎಕರೆ ಜಮೀನನ್ನು ನಿಷೇಧ ಪಟ್ಟಿಯಿಂದ ತೆಗೆದುಹಾಕುವಂತೆ ಒತ್ತಾಯಿಸುತ್ತಿದ್ದಾರೆ. 2020ರ ಸೆಪ್ಟಂಬರ್‌ನಲ್ಲಿ ಧರಣಿ ಪೋರ್ಟಲ್ ಕಾರ್ಯಾಚರಣೆಗೆ ಬಂದಾಗ ಸರ್ವೆ ಸಂಖ್ಯೆ 374 ರ ಅಡಿಯಲ್ಲಿ ಪಟ್ಟಿ ಮಾಡಲಾದ ಭೂಮಿಯನ್ನು “ಸೀಲಿಂಗ್ ಲ್ಯಾಂಡ್” ಎಂದು ಫ್ಲ್ಯಾಗ್ ಮಾಡಲಾಗಿತ್ತು. ಈ ನಡೆ ಯಾರೂ ಆ ಭೂಮಿಯನ್ನು ಬಳಸಂದತೆ ಸೂಚನೆ ನೀಡಲಾಗಿರುತ್ತದೆ.

15 ವರ್ಷಗಳ ಹಿಂದೆ ಮೆಟ್ಟು ಸೈದರೆಡ್ಡಿ ಎಂಬುವವರಿಂದ ಜಮೀನು ಖರೀದಿಸಿರುವುದಾಗಿ ಜಯಸುಧಾ ಹೇಳಿಕೊಂಡಿದ್ದಾರೆ.

ಹಲವು ಕುಂದುಕೊರತೆ ನಿವಾರಣಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಸೇರಿದಂತೆ ಇಬ್ರಾಹಿಂಪಟ್ಟಣ ಮಂಡಲ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ಹಲವು ಬಾರಿ ಭೇಟಿ ನೀಡಿದರೂ ಕುಟುಂಬದವರು ಪರಿಹಾರ ಕಂಡಿಲ್ಲ. ಅವರು ಸೇಲ್ ಡೀಡ್, ಆರ್‌ಡಿಒ ಕಚೇರಿಯಿಂದ “ಟ್ರೇಸ್ ಆಗದ” ದಾಖಲೆ ಮತ್ತು ವಕೀಲರ ಹುಡುಕಾಟ ವರದಿ ಸೇರಿದಂತೆ ಎಲ್ಲಾ ಅಗತ್ಯ ದಾಖಲೆಗಳನ್ನು ಒದಗಿಸಿದ್ದಾರೆ, ಆದರೆ, ಭೂಮಿ ನಿಷೇಧದ ಪಟ್ಟಿಯಲ್ಲಿ ಉಳಿದಿದೆ.

ಸೀಲಿಂಗ್ ಜಮೀನಿನ ಸ್ಥಿತಿಯನ್ನು ಸ್ಪಷ್ಟಪಡಿಸಲು ತಹಶೀಲ್ದಾರ್ ಆರಂಭದಲ್ಲಿ ಕಂದಾಯ ವಿಭಾಗೀಯ ಅಧಿಕಾರಿ (ಆರ್‌ಡಿಒ) ಅವರಿಂದ ದಾಖಲೆಗಳನ್ನು ಕೇಳಿದ್ದರು ಎಂದು ಜೀವನ್ ವಿವರಿಸಿದರು.

ಆದಾಗ್ಯೂ, ಇಷ್ಟೆಲ್ಲಾ ಪ್ರಯತ್ನಗಳು ನಡೆದರೂ ಸಮಸ್ಯೆ ಪರಿಹಾರಕ್ಕೆ ಇನ್ನೂ ಒಂದು ತಿಂಗಳು ಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ. ಧರಣಿ ಪೋರ್ಟಲ್ ಸಮಸ್ಯೆಗಳನ್ನು 10 ದಿನಗಳಲ್ಲಿ ಪರಿಹರಿಸುವಂತೆ ರಾಜ್ಯ ಸರ್ಕಾರವು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ, ಆದರೆ ಇನ್ನೂ ಒಂದು ತಿಂಗಳು ಕಾಯುವಂತೆ ನಮ್ಮನ್ನು ಕೇಳಲಾಗುತ್ತಿದೆ ಎಂದು ಜೀವನ್ ಅವರ ಸಹೋದರ ಜಯಪ್ರಕಾಶ್ ಹೇಳಿದರು.

ರಂಗಾ ರೆಡ್ಡಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಧರಣಿ ಕುಂದುಕೊರತೆಗಳು ಬಗೆಹರಿಯದಿದ್ದು, ತೆಲಂಗಾಣದಲ್ಲಿ ಭೂ ದಾಖಲೆಗಳ ನಿರ್ವಹಣೆಯನ್ನು ಸುವ್ಯವಸ್ಥಿತಗೊಳಿಸಲು ಪರಿಚಯಿಸಲಾದ ಧರಣಿ ವ್ಯವಸ್ಥೆಯಡಿ ಭೂ ಸಮಸ್ಯೆಗಳನ್ನು ಪರಿಹರಿಸುವ ನಿಧಾನಗತಿಯ ಬಗ್ಗೆ ಜೀವನ್ ಅವರ ಪ್ರತಿಭಟನೆಯು ಗಮನ ಸೆಳೆದಿದೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

58 minutes ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 hour ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

5 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

13 hours ago