ಧರಣಿ ಪೋರ್ಟಲ್‌ ಸಮಸ್ಯೆ: ಜಮೀನನ್ನು “ಸೀಲಿಂಗ್ ಲ್ಯಾಂಡ್” ಪಟ್ಟಿಯಿಂದ ತೆಗೆದು ಹಾಕುವಂತೆ ಒತ್ತಾಯಿಸಿ ಹೆಡ್‌ಸ್ಟ್ಯಾಂಡ್ ಪ್ರತಿಭಟನೆ

ಧರಣಿ ಪೋರ್ಟಲ್‌ಗೆ ಸಂಬಂಧಿಸಿದ ತಮ್ಮ ಕುಟುಂಬದ ದೀರ್ಘಾವಧಿಯ ಭೂಮಿ ಸಮಸ್ಯೆಯ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ 26 ವರ್ಷದ ಯು.ಜೀವನ್ ಎಂಬ ವ್ಯಕ್ತಿಯೊಬ್ಬರು ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ    ಇಬ್ರಾಹಿಂಪಟ್ಟಣ ಮಂಡಲದ ಕಚೇರಿಯಲ್ಲಿ 30 ನಿಮಿಷಗಳ ಕಾಲ ತಲೆ ಕೆಳಗೆ ಹಾಕಿ ಕಾಲು ಮೇಲೆ ಎತ್ತಿ(ಹೆಡ್‌ಸ್ಟ್ಯಾಂಡ್) ವಿಶಿಷ್ಚವಾಗಿ ಪ್ರತಿಭಟಿಸಿದರು.

ಐಐಐಟಿ ಹೈದರಾಬಾದ್‌ನ ಪದವೀಧರ ಮತ್ತು ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನಿಂದ ಸ್ನಾತಕೋತ್ತರ ಪದವೀಧರರಾಗಿರುವ ಜೀವನ್, ಕಂದಾಯ ಅಧಿಕಾರಿಗಳಿಂದ ತ್ವರಿತವಾಗಿ ಸಮಸ್ಯೆ ಬಗೆಹರಿಯದ‌ ಕಾರಣ ಹಾಗೂ ವಿಳಂಬ, ನಿರ್ಲಕ್ಷ್ಯ ಧೋರಣೆ ಖಂಡಿಸಿ‌ ಹೊಸ‌ ವಿಧಾನದಿಂದ ಪ್ರತಿಭಟಿಸಿದರು.

ಜೀವನ್ ಅವರ ತಾಯಿ ಉಳಿಂತಲ ಜಯಸುಧಾ ಅವರು ಮೂರು ವರ್ಷಗಳಿಂದ ಮಂಗಲ್ಪಲ್ಲಿ ಗ್ರಾಮದ ತಮ್ಮ 1.32 ಎಕರೆ ಜಮೀನನ್ನು ನಿಷೇಧ ಪಟ್ಟಿಯಿಂದ ತೆಗೆದುಹಾಕುವಂತೆ ಒತ್ತಾಯಿಸುತ್ತಿದ್ದಾರೆ. 2020ರ ಸೆಪ್ಟಂಬರ್‌ನಲ್ಲಿ ಧರಣಿ ಪೋರ್ಟಲ್ ಕಾರ್ಯಾಚರಣೆಗೆ ಬಂದಾಗ ಸರ್ವೆ ಸಂಖ್ಯೆ 374 ರ ಅಡಿಯಲ್ಲಿ ಪಟ್ಟಿ ಮಾಡಲಾದ ಭೂಮಿಯನ್ನು “ಸೀಲಿಂಗ್ ಲ್ಯಾಂಡ್” ಎಂದು ಫ್ಲ್ಯಾಗ್ ಮಾಡಲಾಗಿತ್ತು. ಈ ನಡೆ ಯಾರೂ ಆ ಭೂಮಿಯನ್ನು ಬಳಸಂದತೆ ಸೂಚನೆ ನೀಡಲಾಗಿರುತ್ತದೆ.

15 ವರ್ಷಗಳ ಹಿಂದೆ ಮೆಟ್ಟು ಸೈದರೆಡ್ಡಿ ಎಂಬುವವರಿಂದ ಜಮೀನು ಖರೀದಿಸಿರುವುದಾಗಿ ಜಯಸುಧಾ ಹೇಳಿಕೊಂಡಿದ್ದಾರೆ.

ಹಲವು ಕುಂದುಕೊರತೆ ನಿವಾರಣಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಸೇರಿದಂತೆ ಇಬ್ರಾಹಿಂಪಟ್ಟಣ ಮಂಡಲ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ಹಲವು ಬಾರಿ ಭೇಟಿ ನೀಡಿದರೂ ಕುಟುಂಬದವರು ಪರಿಹಾರ ಕಂಡಿಲ್ಲ. ಅವರು ಸೇಲ್ ಡೀಡ್, ಆರ್‌ಡಿಒ ಕಚೇರಿಯಿಂದ “ಟ್ರೇಸ್ ಆಗದ” ದಾಖಲೆ ಮತ್ತು ವಕೀಲರ ಹುಡುಕಾಟ ವರದಿ ಸೇರಿದಂತೆ ಎಲ್ಲಾ ಅಗತ್ಯ ದಾಖಲೆಗಳನ್ನು ಒದಗಿಸಿದ್ದಾರೆ, ಆದರೆ, ಭೂಮಿ ನಿಷೇಧದ ಪಟ್ಟಿಯಲ್ಲಿ ಉಳಿದಿದೆ.

ಸೀಲಿಂಗ್ ಜಮೀನಿನ ಸ್ಥಿತಿಯನ್ನು ಸ್ಪಷ್ಟಪಡಿಸಲು ತಹಶೀಲ್ದಾರ್ ಆರಂಭದಲ್ಲಿ ಕಂದಾಯ ವಿಭಾಗೀಯ ಅಧಿಕಾರಿ (ಆರ್‌ಡಿಒ) ಅವರಿಂದ ದಾಖಲೆಗಳನ್ನು ಕೇಳಿದ್ದರು ಎಂದು ಜೀವನ್ ವಿವರಿಸಿದರು.

ಆದಾಗ್ಯೂ, ಇಷ್ಟೆಲ್ಲಾ ಪ್ರಯತ್ನಗಳು ನಡೆದರೂ ಸಮಸ್ಯೆ ಪರಿಹಾರಕ್ಕೆ ಇನ್ನೂ ಒಂದು ತಿಂಗಳು ಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ. ಧರಣಿ ಪೋರ್ಟಲ್ ಸಮಸ್ಯೆಗಳನ್ನು 10 ದಿನಗಳಲ್ಲಿ ಪರಿಹರಿಸುವಂತೆ ರಾಜ್ಯ ಸರ್ಕಾರವು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ, ಆದರೆ ಇನ್ನೂ ಒಂದು ತಿಂಗಳು ಕಾಯುವಂತೆ ನಮ್ಮನ್ನು ಕೇಳಲಾಗುತ್ತಿದೆ ಎಂದು ಜೀವನ್ ಅವರ ಸಹೋದರ ಜಯಪ್ರಕಾಶ್ ಹೇಳಿದರು.

ರಂಗಾ ರೆಡ್ಡಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಧರಣಿ ಕುಂದುಕೊರತೆಗಳು ಬಗೆಹರಿಯದಿದ್ದು, ತೆಲಂಗಾಣದಲ್ಲಿ ಭೂ ದಾಖಲೆಗಳ ನಿರ್ವಹಣೆಯನ್ನು ಸುವ್ಯವಸ್ಥಿತಗೊಳಿಸಲು ಪರಿಚಯಿಸಲಾದ ಧರಣಿ ವ್ಯವಸ್ಥೆಯಡಿ ಭೂ ಸಮಸ್ಯೆಗಳನ್ನು ಪರಿಹರಿಸುವ ನಿಧಾನಗತಿಯ ಬಗ್ಗೆ ಜೀವನ್ ಅವರ ಪ್ರತಿಭಟನೆಯು ಗಮನ ಸೆಳೆದಿದೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

6 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

7 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

8 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

9 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

16 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago