ಧರಣಿ ಪೋರ್ಟಲ್‌ ಸಮಸ್ಯೆ: ಜಮೀನನ್ನು “ಸೀಲಿಂಗ್ ಲ್ಯಾಂಡ್” ಪಟ್ಟಿಯಿಂದ ತೆಗೆದು ಹಾಕುವಂತೆ ಒತ್ತಾಯಿಸಿ ಹೆಡ್‌ಸ್ಟ್ಯಾಂಡ್ ಪ್ರತಿಭಟನೆ

ಧರಣಿ ಪೋರ್ಟಲ್‌ಗೆ ಸಂಬಂಧಿಸಿದ ತಮ್ಮ ಕುಟುಂಬದ ದೀರ್ಘಾವಧಿಯ ಭೂಮಿ ಸಮಸ್ಯೆಯ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ 26 ವರ್ಷದ ಯು.ಜೀವನ್ ಎಂಬ ವ್ಯಕ್ತಿಯೊಬ್ಬರು ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ    ಇಬ್ರಾಹಿಂಪಟ್ಟಣ ಮಂಡಲದ ಕಚೇರಿಯಲ್ಲಿ 30 ನಿಮಿಷಗಳ ಕಾಲ ತಲೆ ಕೆಳಗೆ ಹಾಕಿ ಕಾಲು ಮೇಲೆ ಎತ್ತಿ(ಹೆಡ್‌ಸ್ಟ್ಯಾಂಡ್) ವಿಶಿಷ್ಚವಾಗಿ ಪ್ರತಿಭಟಿಸಿದರು.

ಐಐಐಟಿ ಹೈದರಾಬಾದ್‌ನ ಪದವೀಧರ ಮತ್ತು ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನಿಂದ ಸ್ನಾತಕೋತ್ತರ ಪದವೀಧರರಾಗಿರುವ ಜೀವನ್, ಕಂದಾಯ ಅಧಿಕಾರಿಗಳಿಂದ ತ್ವರಿತವಾಗಿ ಸಮಸ್ಯೆ ಬಗೆಹರಿಯದ‌ ಕಾರಣ ಹಾಗೂ ವಿಳಂಬ, ನಿರ್ಲಕ್ಷ್ಯ ಧೋರಣೆ ಖಂಡಿಸಿ‌ ಹೊಸ‌ ವಿಧಾನದಿಂದ ಪ್ರತಿಭಟಿಸಿದರು.

ಜೀವನ್ ಅವರ ತಾಯಿ ಉಳಿಂತಲ ಜಯಸುಧಾ ಅವರು ಮೂರು ವರ್ಷಗಳಿಂದ ಮಂಗಲ್ಪಲ್ಲಿ ಗ್ರಾಮದ ತಮ್ಮ 1.32 ಎಕರೆ ಜಮೀನನ್ನು ನಿಷೇಧ ಪಟ್ಟಿಯಿಂದ ತೆಗೆದುಹಾಕುವಂತೆ ಒತ್ತಾಯಿಸುತ್ತಿದ್ದಾರೆ. 2020ರ ಸೆಪ್ಟಂಬರ್‌ನಲ್ಲಿ ಧರಣಿ ಪೋರ್ಟಲ್ ಕಾರ್ಯಾಚರಣೆಗೆ ಬಂದಾಗ ಸರ್ವೆ ಸಂಖ್ಯೆ 374 ರ ಅಡಿಯಲ್ಲಿ ಪಟ್ಟಿ ಮಾಡಲಾದ ಭೂಮಿಯನ್ನು “ಸೀಲಿಂಗ್ ಲ್ಯಾಂಡ್” ಎಂದು ಫ್ಲ್ಯಾಗ್ ಮಾಡಲಾಗಿತ್ತು. ಈ ನಡೆ ಯಾರೂ ಆ ಭೂಮಿಯನ್ನು ಬಳಸಂದತೆ ಸೂಚನೆ ನೀಡಲಾಗಿರುತ್ತದೆ.

15 ವರ್ಷಗಳ ಹಿಂದೆ ಮೆಟ್ಟು ಸೈದರೆಡ್ಡಿ ಎಂಬುವವರಿಂದ ಜಮೀನು ಖರೀದಿಸಿರುವುದಾಗಿ ಜಯಸುಧಾ ಹೇಳಿಕೊಂಡಿದ್ದಾರೆ.

ಹಲವು ಕುಂದುಕೊರತೆ ನಿವಾರಣಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಸೇರಿದಂತೆ ಇಬ್ರಾಹಿಂಪಟ್ಟಣ ಮಂಡಲ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ಹಲವು ಬಾರಿ ಭೇಟಿ ನೀಡಿದರೂ ಕುಟುಂಬದವರು ಪರಿಹಾರ ಕಂಡಿಲ್ಲ. ಅವರು ಸೇಲ್ ಡೀಡ್, ಆರ್‌ಡಿಒ ಕಚೇರಿಯಿಂದ “ಟ್ರೇಸ್ ಆಗದ” ದಾಖಲೆ ಮತ್ತು ವಕೀಲರ ಹುಡುಕಾಟ ವರದಿ ಸೇರಿದಂತೆ ಎಲ್ಲಾ ಅಗತ್ಯ ದಾಖಲೆಗಳನ್ನು ಒದಗಿಸಿದ್ದಾರೆ, ಆದರೆ, ಭೂಮಿ ನಿಷೇಧದ ಪಟ್ಟಿಯಲ್ಲಿ ಉಳಿದಿದೆ.

ಸೀಲಿಂಗ್ ಜಮೀನಿನ ಸ್ಥಿತಿಯನ್ನು ಸ್ಪಷ್ಟಪಡಿಸಲು ತಹಶೀಲ್ದಾರ್ ಆರಂಭದಲ್ಲಿ ಕಂದಾಯ ವಿಭಾಗೀಯ ಅಧಿಕಾರಿ (ಆರ್‌ಡಿಒ) ಅವರಿಂದ ದಾಖಲೆಗಳನ್ನು ಕೇಳಿದ್ದರು ಎಂದು ಜೀವನ್ ವಿವರಿಸಿದರು.

ಆದಾಗ್ಯೂ, ಇಷ್ಟೆಲ್ಲಾ ಪ್ರಯತ್ನಗಳು ನಡೆದರೂ ಸಮಸ್ಯೆ ಪರಿಹಾರಕ್ಕೆ ಇನ್ನೂ ಒಂದು ತಿಂಗಳು ಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ. ಧರಣಿ ಪೋರ್ಟಲ್ ಸಮಸ್ಯೆಗಳನ್ನು 10 ದಿನಗಳಲ್ಲಿ ಪರಿಹರಿಸುವಂತೆ ರಾಜ್ಯ ಸರ್ಕಾರವು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ, ಆದರೆ ಇನ್ನೂ ಒಂದು ತಿಂಗಳು ಕಾಯುವಂತೆ ನಮ್ಮನ್ನು ಕೇಳಲಾಗುತ್ತಿದೆ ಎಂದು ಜೀವನ್ ಅವರ ಸಹೋದರ ಜಯಪ್ರಕಾಶ್ ಹೇಳಿದರು.

ರಂಗಾ ರೆಡ್ಡಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಧರಣಿ ಕುಂದುಕೊರತೆಗಳು ಬಗೆಹರಿಯದಿದ್ದು, ತೆಲಂಗಾಣದಲ್ಲಿ ಭೂ ದಾಖಲೆಗಳ ನಿರ್ವಹಣೆಯನ್ನು ಸುವ್ಯವಸ್ಥಿತಗೊಳಿಸಲು ಪರಿಚಯಿಸಲಾದ ಧರಣಿ ವ್ಯವಸ್ಥೆಯಡಿ ಭೂ ಸಮಸ್ಯೆಗಳನ್ನು ಪರಿಹರಿಸುವ ನಿಧಾನಗತಿಯ ಬಗ್ಗೆ ಜೀವನ್ ಅವರ ಪ್ರತಿಭಟನೆಯು ಗಮನ ಸೆಳೆದಿದೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

22 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago