ಧರ್ಮದ ಹೆಸರಲ್ಲಿ ದ್ವೇಷಿಸುವುದು ಅಮಾನವೀಯ, ಕೆಟ್ಟ ನಡವಳಿಕೆ- ಸಿಎಂ ಸಿದ್ದರಾಮಯ್ಯ

ಧರ್ಮದ ಹೆಸರಲ್ಲಿ, ಜಾತಿಯ ಹೆಸರಲ್ಲಿ ಮುಸ್ಲಿಂಮರನ್ನು, ದಲಿತರನ್ನು, ಶೂದ್ರರನ್ನು, ಶ್ರಮಿಕ‌ ವರ್ಗದವರನ್ನು ದ್ವೇಷಿಸುವುದು ಅತ್ಯಂತ ಅಮಾನವೀಯವಾದ, ಕೆಟ್ಟ ನಡವಳಿಕೆ. ಜನರಿಗೆ ಅರ್ಥ ಆಗುವ ರೀತಿಯಲ್ಲಿ ಸರಳವಾದ ಜನರ ಭಾಷೆಯಲ್ಲಿ ಮನುಷ್ಯನ ಮೌಲ್ಯಗಳನ್ನು ಬಸವಾದಿ ಶರಣರು ಹೇಳಿದ್ದಾರೆ. ನಾರಾಯಣ ಗುರುಗಳು, ಒಂದೇ ಜಾತಿ-ಒಂದೇ ಮತ-ಒಂದೇ ದೇವರು ಎಂದರು. ಕನಕದಾಸರು ಮತ್ತು ಬಸವಾದಿ ಶರಣರು ಹೇಳಿದ್ದೂ ಇದೇ ಮೌಲ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ಸವಿತಾ ಸಮಾಜ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಎಂ.ಎಸ್.ಮುತ್ತುರಾಜ್ ಅವರ “ಮಂಗಳವಾದ್ಯ” ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್.ಮುತ್ತುರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ. ಕೈಲಾಸ, ಸ್ವರ್ಗ, ನರಕ ಎನ್ನುವುದು ಬೇರೆಲ್ಲೂ ಇಲ್ಲ. ಎಲ್ಲವೂ ಇಲ್ಲೇ ಇದೆ. ಯಾವ ಕಾಯಕವು ಮೇಲೂ ಅಲ್ಲ, ಯಾವುದು ಕೀಳು ಅಲ್ಲ. ಎಲ್ಲ ಕಾಯಕವೂ ಸಮಾನ ಮಹತ್ವ ಮತ್ತು ಸಮಾನ ಘನತೆ ಹೊಂದಿವೆ ಎಂದರು.

ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಣ್ಣನವರು ಹೇಳಿದ್ದು ಇದೇ ಕಾರಣಕ್ಕೆ. ಪರಸ್ಪರ ಮನುಷ್ಯರನ್ನು ಮನುಷ್ಯರು ಗೌರವಿಸುವುದೇ ದೊಡ್ಡ ಮೌಲ್ಯ. ಮನುಷ್ಯ ದ್ವೇಷಕ್ಕಿಂತ ಕೆಟ್ಟ ಮೌಲ್ಯ ಬೇರೆ ಇಲ್ಲ. ಅದಕ್ಕೇ ರಾಷ್ಟ್ರಕವಿ ಕುವೆಂಪು ಅವರು “ಸರ್ವ ಜನಾಂಗದ ಶಾಂತಿಯ ತೋಟ”  ಎಂದು ಕರೆದಿದ್ದಾರೆ ಎಂದು ತಿಳಿಸಿದರು.

ನಿಮ್ಮನ್ನು ಯಾವ ದೇವಸ್ಥಾನಕ್ಕೆ ಒಳಗೆ ಬಿಡುವುದಿಲ್ಲವೋ ಆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಿ ನೀವೇ ದೇವಸ್ಥಾನ ಕಟ್ಟಿ, ನೀವೇ ಪೂಜೆ ಮಾಡಿ ಎಂದು ನಾರಾಯಣಗುರುಗಳು ಹೇಳಿದ್ದಾರೆ. ಇದನ್ನು ಪಾಲಿಸಬೇಕು. ದೇವರಿದ್ದಾನೆ, ಆದರೆ ದೇವರು ದೇವಸ್ಥಾನದಲ್ಲಿ ಮಾತ್ರ ಇದ್ದಾನೆ ಎನ್ನುವುದು ಸರಿಯಲ್ಲ. ಎಲ್ಲಾ ಕಡೆಯೂ ದೇವರಿದ್ದಾನೆ. ಅದಕ್ಕೇ ಶರಣರು, “ಉಳ್ಳವರು ದೇವಸ್ಥಾನವ ಮಾಡುವರು. ನಾನೇನು ಮಾಡಲಯ್ಯ ಬಡವ” ಎಂದಿದ್ದಾರೆ ಎಂದು ಹೇಳಿದರು.

ನಾನು ಕೊನೆಯವರೆಗೂ ಸಾಮಾಜಿಕ ನ್ಯಾಯ ಮತ್ತು ಸ್ವಾಭಿಮಾನದ ರಾಜಕಾರಣ ಮಾಡುತ್ತೇನೆ. ನಾವು ರೂಪಿಸುವ ಕಾರ್ಯಕ್ರಮಗಳು ಬಡವರ ಪರವಾಗಿ ಇರುತ್ತವೆ. ನಮ್ಮ‌ ಕಾರ್ಯಕ್ರಮಗಳು ಮನೆ ಮನೆ ತಲುಪಿವೆ. ಬಿಜೆಪಿಯವರ ಟೀಕೆಗೆ ಜನ ಬೆಲೆ ಕೊಡಲ್ಲ. ನಾನೂ ಕೊಡಲ್ಲ. ನಾಡಿನ ಜನ ನಮ್ಮ ಜೊತೆಗಿದ್ದಾರೆ ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಎಚ್.ಎಂ.ರೇವಣ್ಣ, ಪ್ರಗತಿಪರ ಚಿಂತಕ ಎಲ್.ಮುಕುಂದರಾಜ್ ಮತ್ತು ಸವಿತ ಸಮಾಜದ ಅಧ್ಯಕ್ಷರಾದ ಕಿರಣ್ ಕುಮಾರ್ ಅವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

3 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

5 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

10 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

12 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

15 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago