ಕೋಲಾರ : ಧರ್ಮಭೂಮಿ ಮತ್ತು ಕರ್ಮಭೂಮಿ ನಮ್ಮ ರಾಷ್ಟ್ರದ ಆಧ್ಯಾತ್ಮಿಕ ಸಂಪತ್ತುಯಾಗಿದೆ, ಶ್ರದ್ಧೆ ಮತ್ತು ಭಕ್ತಿಯ ದೇವರ ಧ್ಯಾನ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ಸಿಗುತ್ತದೆ ಎಂದು ಬೆಂಗಳೂರು ಪೂರ್ವ ವಲಯ ಡಿಸಿಪಿ ಡಿ.ದೇವರಾಜ್ ತಿಳಿಸಿದರು.
ತಾಲೂಕಿನ ನರಸಾಪುರ ಗ್ರಾಮದಲ್ಲಿ ಬಿ ಆರ್ ಅಂಬೇಡ್ಕರ್ ಯುವಕರ ಸಂಘದ ವತಿಯಿಂದ ಏರ್ಪಡಿಸಿದ್ದ ಗಣೇಶೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮನುಷ್ಯನಿಗೆ ಮೌಲ್ಯ ಅಧಾರಿತ ಶಿಕ್ಷಣ ಮತ್ತು ಜೀವನ ಬಹಳ ಮುಖ್ಯವಾಗಿದೆ ಪ್ರತಿಯೊಬ್ಬರೂ ಎಲ್ಲರ ಜೊತೆ ಒಂದಾಗಿ ಬಾಳುವ ಕಲೆಯನ್ನು ಕಲಿತುಕೊಳ್ಳಬೇಕು, ನಮ್ಮಲ್ಲಿ ಪ್ರೀತಿ, ದಯೆ, ಕರುಣೆ, ಕನಿಕರ, ತ್ಯಾಗ, ವಾತ್ಸಲ್ಯ ಮುಂತಾದ ಮಾನವೀಯ ಸದ್ಗುಣಗಳನ್ನು ಅಳವಡಿಸಿ ಅನುಸರಿಸಬೇಕಾಗುತ್ತದೆ, ಈ ಎಲ್ಲಾ ಗುಣಗಳನ್ನು ಅಳವಡಿಸಿಕೊಂಡರೆ ಆಧ್ಯಾತ್ಮಿಕತೆಯ ಮನೋಭಾವ ಬರುತ್ತದೆ ಎಂದು ತಿಳಿಸಿದರು,
ಗಣೇಶೋತ್ಸವ ಕಾರ್ಯಕ್ರಮದಲ್ಲಿ ಒಗ್ಗಟ್ಟಾಗಿರುವಂತೆ ಊರಿನಲ್ಲಿರುವ ಸಮಸ್ಯೆಗಳ ವಿರುದ್ಧ ಒಗ್ಗಟ್ಟಿನ ಮಂತ್ರವನ್ನು ಜಪಿಸಿ ಕಾರ್ಯ ಮಾಡಿದರೆ ಗ್ರಾಮದ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಆಗ ಅಭಿವೃದ್ಧಿ ಸಾಧ್ಯ, ಪ್ರತಿಯೊಬ್ಬ ಮನುಷ್ಯ ಸಂಪ್ರದಾಯ ಮತ್ತು ಸಂಸ್ಕಾರವನ್ನು ಕಲಿತು ಬಾಳ ಬೇಕಾಗುವ ರಕ್ಷಣೆಗಳನ್ನು ಕಲಿಯಬೇಕು, ಇತ್ತೀಚಿನ ದಿನಗಳಲ್ಲಿ ಕೆಲವೊಂದು ನೀತಿ ನಿಯಮಗಳು ಕಣ್ಮರೆಯಾಗುತ್ತಿದ್ದು ಅವುಗಳನ್ನು ಪಾಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದರು
ಗಣೇಶೋತ್ಸವ ಪ್ರಯುಕ್ತ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು, ಸ್ಪರ್ಧೆಯಲ್ಲಿ ಗೆದ್ದವರಿಗೆ ಪ್ರಥಮ ಸ್ಥಾನ 3 ಸಾವಿರ, ದ್ವಿತೀಯ ಸ್ಥಾನ 2 ಸಾವಿರ, ತೃತೀಯ ಸ್ಥಾನ 1 ಸಾವಿರ ಹಾಗೂ ಭಾಗವಹಿಸಿದ್ದ ಎಲ್ಲರಿಗೂ ಸಮಾಧಾನಕರ ಬಹುಮಾನಗಳನ್ನು ನೀಡಲಾಯಿತು,
ಈ ಸಂದರ್ಭದಲ್ಲಿ ನರಸಾಪುರ ಗ್ರಾಪಂ ಸದಸ್ಯ ಕೆ ಇ ಬಿ ಚಂದ್ರು ಮುಖಂಡರುಗಳಾದ ಖಾಜಿಕಲ್ಲಹಳ್ಳಿ ಹರೀಶ್, ಕಡಗಟ್ಟೂರು ವಿಜಯಕುಮಾರ್, ಬೆಳಮಾರನಹಳ್ಳಿ ಚಂದ್ರಶೇಖರ್, ನರಸಾಪುರ ಗ್ರಾಮದ ಲಟ್ಟು, ಟಿ. ಬಾಬು, ದುರ್ಗೇಶ್, ಪೃಥ್ವಿ ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ಗ್ರಾಮಸ್ಥರು ಇದ್ದರು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…