Categories: ಕೋಲಾರ

ಧರ್ಮಭೂಮಿ ಮತ್ತು ಕರ್ಮಭೂಮಿ ನಮ್ಮ ರಾಷ್ಟ್ರದ ಆಧ್ಯಾತ್ಮಿಕ ಸಂಪತ್ತು – ಡಿಸಿಪಿ ದೇವರಾಜ್

ಕೋಲಾರ : ಧರ್ಮಭೂಮಿ ಮತ್ತು ಕರ್ಮಭೂಮಿ ನಮ್ಮ ರಾಷ್ಟ್ರದ ಆಧ್ಯಾತ್ಮಿಕ ಸಂಪತ್ತುಯಾಗಿದೆ, ಶ್ರದ್ಧೆ ಮತ್ತು ಭಕ್ತಿಯ ದೇವರ ಧ್ಯಾನ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ಸಿಗುತ್ತದೆ ಎಂದು ಬೆಂಗಳೂರು ಪೂರ್ವ ವಲಯ ಡಿಸಿಪಿ ಡಿ.ದೇವರಾಜ್ ತಿಳಿಸಿದರು.

ತಾಲೂಕಿನ ನರಸಾಪುರ ಗ್ರಾಮದಲ್ಲಿ ಬಿ ಆರ್ ಅಂಬೇಡ್ಕರ್ ಯುವಕರ ಸಂಘದ ವತಿಯಿಂದ ಏರ್ಪಡಿಸಿದ್ದ ಗಣೇಶೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮನುಷ್ಯನಿಗೆ ಮೌಲ್ಯ ಅಧಾರಿತ ಶಿಕ್ಷಣ ಮತ್ತು ಜೀವನ ಬಹಳ ಮುಖ್ಯವಾಗಿದೆ ಪ್ರತಿಯೊಬ್ಬರೂ ಎಲ್ಲರ ಜೊತೆ ಒಂದಾಗಿ ಬಾಳುವ ಕಲೆಯನ್ನು ಕಲಿತುಕೊಳ್ಳಬೇಕು, ನಮ್ಮಲ್ಲಿ ಪ್ರೀತಿ, ದಯೆ, ಕರುಣೆ, ಕನಿಕರ, ತ್ಯಾಗ, ವಾತ್ಸಲ್ಯ ಮುಂತಾದ ಮಾನವೀಯ ಸದ್ಗುಣಗಳನ್ನು ಅಳವಡಿಸಿ ಅನುಸರಿಸಬೇಕಾಗುತ್ತದೆ, ಈ ಎಲ್ಲಾ ಗುಣಗಳನ್ನು ಅಳವಡಿಸಿಕೊಂಡರೆ ಆಧ್ಯಾತ್ಮಿಕತೆಯ ಮನೋಭಾವ ಬರುತ್ತದೆ ಎಂದು ತಿಳಿಸಿದರು,

ಗಣೇಶೋತ್ಸವ ಕಾರ್ಯಕ್ರಮದಲ್ಲಿ ಒಗ್ಗಟ್ಟಾಗಿರುವಂತೆ ಊರಿನಲ್ಲಿರುವ ಸಮಸ್ಯೆಗಳ ವಿರುದ್ಧ ಒಗ್ಗಟ್ಟಿನ ಮಂತ್ರವನ್ನು ಜಪಿಸಿ ಕಾರ್ಯ ಮಾಡಿದರೆ ಗ್ರಾಮದ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಆಗ ಅಭಿವೃದ್ಧಿ ಸಾಧ್ಯ, ಪ್ರತಿಯೊಬ್ಬ ಮನುಷ್ಯ ಸಂಪ್ರದಾಯ ಮತ್ತು ಸಂಸ್ಕಾರವನ್ನು ಕಲಿತು ಬಾಳ ಬೇಕಾಗುವ ರಕ್ಷಣೆಗಳನ್ನು ಕಲಿಯಬೇಕು, ಇತ್ತೀಚಿನ ದಿನಗಳಲ್ಲಿ ಕೆಲವೊಂದು ನೀತಿ ನಿಯಮಗಳು ಕಣ್ಮರೆಯಾಗುತ್ತಿದ್ದು ಅವುಗಳನ್ನು ಪಾಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದರು‌

ಗಣೇಶೋತ್ಸವ ಪ್ರಯುಕ್ತ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು, ಸ್ಪರ್ಧೆಯಲ್ಲಿ ಗೆದ್ದವರಿಗೆ ಪ್ರಥಮ ಸ್ಥಾನ 3 ಸಾವಿರ, ದ್ವಿತೀಯ ಸ್ಥಾನ 2 ಸಾವಿರ, ತೃತೀಯ ಸ್ಥಾನ 1 ಸಾವಿರ ಹಾಗೂ ಭಾಗವಹಿಸಿದ್ದ ಎಲ್ಲರಿಗೂ ಸಮಾಧಾನಕರ ಬಹುಮಾನಗಳನ್ನು ನೀಡಲಾಯಿತು,

ಈ ಸಂದರ್ಭದಲ್ಲಿ ನರಸಾಪುರ ಗ್ರಾಪಂ ಸದಸ್ಯ ಕೆ ಇ ಬಿ ಚಂದ್ರು ಮುಖಂಡರುಗಳಾದ ಖಾಜಿಕಲ್ಲಹಳ್ಳಿ ಹರೀಶ್, ಕಡಗಟ್ಟೂರು ವಿಜಯಕುಮಾರ್, ಬೆಳಮಾರನಹಳ್ಳಿ ಚಂದ್ರಶೇಖರ್, ನರಸಾಪುರ ಗ್ರಾಮದ ಲಟ್ಟು, ಟಿ. ಬಾಬು, ದುರ್ಗೇಶ್, ಪೃಥ್ವಿ ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ಗ್ರಾಮಸ್ಥರು ಇದ್ದರು.

Ramesh Babu

Journalist

Recent Posts

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

1 hour ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

2 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

3 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

5 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

10 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

13 hours ago