Categories: ಕೋಲಾರ

ಧರ್ಮಭೂಮಿ ಮತ್ತು ಕರ್ಮಭೂಮಿ ನಮ್ಮ ರಾಷ್ಟ್ರದ ಆಧ್ಯಾತ್ಮಿಕ ಸಂಪತ್ತು – ಡಿಸಿಪಿ ದೇವರಾಜ್

ಕೋಲಾರ : ಧರ್ಮಭೂಮಿ ಮತ್ತು ಕರ್ಮಭೂಮಿ ನಮ್ಮ ರಾಷ್ಟ್ರದ ಆಧ್ಯಾತ್ಮಿಕ ಸಂಪತ್ತುಯಾಗಿದೆ, ಶ್ರದ್ಧೆ ಮತ್ತು ಭಕ್ತಿಯ ದೇವರ ಧ್ಯಾನ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ಸಿಗುತ್ತದೆ ಎಂದು ಬೆಂಗಳೂರು ಪೂರ್ವ ವಲಯ ಡಿಸಿಪಿ ಡಿ.ದೇವರಾಜ್ ತಿಳಿಸಿದರು.

ತಾಲೂಕಿನ ನರಸಾಪುರ ಗ್ರಾಮದಲ್ಲಿ ಬಿ ಆರ್ ಅಂಬೇಡ್ಕರ್ ಯುವಕರ ಸಂಘದ ವತಿಯಿಂದ ಏರ್ಪಡಿಸಿದ್ದ ಗಣೇಶೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮನುಷ್ಯನಿಗೆ ಮೌಲ್ಯ ಅಧಾರಿತ ಶಿಕ್ಷಣ ಮತ್ತು ಜೀವನ ಬಹಳ ಮುಖ್ಯವಾಗಿದೆ ಪ್ರತಿಯೊಬ್ಬರೂ ಎಲ್ಲರ ಜೊತೆ ಒಂದಾಗಿ ಬಾಳುವ ಕಲೆಯನ್ನು ಕಲಿತುಕೊಳ್ಳಬೇಕು, ನಮ್ಮಲ್ಲಿ ಪ್ರೀತಿ, ದಯೆ, ಕರುಣೆ, ಕನಿಕರ, ತ್ಯಾಗ, ವಾತ್ಸಲ್ಯ ಮುಂತಾದ ಮಾನವೀಯ ಸದ್ಗುಣಗಳನ್ನು ಅಳವಡಿಸಿ ಅನುಸರಿಸಬೇಕಾಗುತ್ತದೆ, ಈ ಎಲ್ಲಾ ಗುಣಗಳನ್ನು ಅಳವಡಿಸಿಕೊಂಡರೆ ಆಧ್ಯಾತ್ಮಿಕತೆಯ ಮನೋಭಾವ ಬರುತ್ತದೆ ಎಂದು ತಿಳಿಸಿದರು,

ಗಣೇಶೋತ್ಸವ ಕಾರ್ಯಕ್ರಮದಲ್ಲಿ ಒಗ್ಗಟ್ಟಾಗಿರುವಂತೆ ಊರಿನಲ್ಲಿರುವ ಸಮಸ್ಯೆಗಳ ವಿರುದ್ಧ ಒಗ್ಗಟ್ಟಿನ ಮಂತ್ರವನ್ನು ಜಪಿಸಿ ಕಾರ್ಯ ಮಾಡಿದರೆ ಗ್ರಾಮದ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಆಗ ಅಭಿವೃದ್ಧಿ ಸಾಧ್ಯ, ಪ್ರತಿಯೊಬ್ಬ ಮನುಷ್ಯ ಸಂಪ್ರದಾಯ ಮತ್ತು ಸಂಸ್ಕಾರವನ್ನು ಕಲಿತು ಬಾಳ ಬೇಕಾಗುವ ರಕ್ಷಣೆಗಳನ್ನು ಕಲಿಯಬೇಕು, ಇತ್ತೀಚಿನ ದಿನಗಳಲ್ಲಿ ಕೆಲವೊಂದು ನೀತಿ ನಿಯಮಗಳು ಕಣ್ಮರೆಯಾಗುತ್ತಿದ್ದು ಅವುಗಳನ್ನು ಪಾಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದರು‌

ಗಣೇಶೋತ್ಸವ ಪ್ರಯುಕ್ತ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು, ಸ್ಪರ್ಧೆಯಲ್ಲಿ ಗೆದ್ದವರಿಗೆ ಪ್ರಥಮ ಸ್ಥಾನ 3 ಸಾವಿರ, ದ್ವಿತೀಯ ಸ್ಥಾನ 2 ಸಾವಿರ, ತೃತೀಯ ಸ್ಥಾನ 1 ಸಾವಿರ ಹಾಗೂ ಭಾಗವಹಿಸಿದ್ದ ಎಲ್ಲರಿಗೂ ಸಮಾಧಾನಕರ ಬಹುಮಾನಗಳನ್ನು ನೀಡಲಾಯಿತು,

ಈ ಸಂದರ್ಭದಲ್ಲಿ ನರಸಾಪುರ ಗ್ರಾಪಂ ಸದಸ್ಯ ಕೆ ಇ ಬಿ ಚಂದ್ರು ಮುಖಂಡರುಗಳಾದ ಖಾಜಿಕಲ್ಲಹಳ್ಳಿ ಹರೀಶ್, ಕಡಗಟ್ಟೂರು ವಿಜಯಕುಮಾರ್, ಬೆಳಮಾರನಹಳ್ಳಿ ಚಂದ್ರಶೇಖರ್, ನರಸಾಪುರ ಗ್ರಾಮದ ಲಟ್ಟು, ಟಿ. ಬಾಬು, ದುರ್ಗೇಶ್, ಪೃಥ್ವಿ ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ಗ್ರಾಮಸ್ಥರು ಇದ್ದರು.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

13 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

13 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

18 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

4 days ago