ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ. ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…