Categories: ಲೇಖನ

ಧಾರಾವಾಹಿಗಳು ಎಂಬ ಮನರಂಜನಾ ಬಲೆಯೊಳಗೆ ನಮ್ಮ ಹೆಣ್ಣು ಮಕ್ಕಳು…..

ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಭಾರತೀಯ ಮಹಿಳೆಯರ ಮೇಲೆ ಅತಿ ಹೆಚ್ಚು ಪ್ರಭಾವ ಬೀರುತ್ತಿರುವುದು ಧಾರಾವಾಹಿಗಳೆಂಬ ಮಾಯಾಲೋಕ.,…………

ಹೆಚ್ಚು ಕಡಿಮೆ ಅವರ ಮನಸ್ಥಿತಿಯನ್ನು ನಿಯಂತ್ರಿಸುತ್ತಿದೆ. ಗಂಡಸರೂ ಧಾರಾವಾಹಿಗಳನ್ನು ನೋಡುತ್ತಾರಾದರು ಸಿನಿಮಾ ಹುಚ್ಚು ಸ್ವಲ್ಪ ಹೆಚ್ಚು. ಅದರಲ್ಲೂ ಯುವಕರ ಆದ್ಯತೆ ಚಲನಚಿತ್ರವೇ.
ಇದೊಂದು ಕೋಟ್ಯಾಂತರ ರೂಪಾಯಿಗಳ ಮನರಂಜನಾ ವ್ಯವಹಾರ.

ಆದರೆ ಈಗ ಆ ವ್ಯವಹಾರ ನಮ್ಮ ಮನೆಗಳಿಗೇ ಮುಖ್ಯವಾಗಿ ಕೌಟುಂಬಿಕ ಮೌಲ್ಯಗಳಿಗೇ ಕೈ ಹಾಕಿದೆ.
ವ್ಯಾವಹಾರಿಕ ಪೈಪೋಟಿಗಿಳಿದ ಅದರಲ್ಲೂ ಮುಖ್ಯವಾಗಿ ಟೆಲಿವಿಷನ್ ಮಾಧ್ಯಮ ಇನ್ನೂ ಬಹಳಷ್ಟು ವಿಷಯಗಳಲ್ಲಿ ಮಾನಸಿಕವಾಗಿ ಭ್ರೂಣಾವಸ್ಥೆಯಲ್ಲೇ ಇರುವ ಅನೇಕ ಮಹಿಳೆಯರ ಅಂತರಾಳಕ್ಕೆ ಲಗ್ಗೆ ಇಟ್ಟು ತಪ್ಪು ಸಂದೇಶಗಳನ್ನು ಹರಿಯಬಿಡುತ್ತಿದೆ.

ಹೆಣ್ಣು ಸಮಾಜದ ಮುಕ್ತತೆಗೆ ತೆರೆದುಕೊಳ್ಳುತ್ತಿರುವ, ಸ್ವಾತಂತ್ರ್ಯ ಮತ್ತು ಸಮಾನತೆಗಾಗಿ ಹೋರಾಡುತ್ತಿರುವ ಸಂದರ್ಭದಲ್ಲಿ ಕೆಟ್ಟ ಮೌಲ್ಯಗಳನ್ನು – ಅಮಾನವೀಯ ವರ್ತನೆಗಳನ್ನು ಸಮರ್ಥಿಸುವ,
ಅತಿರಂಜಿತ ಘಟನೆಗಳನ್ನು ವೈಭವೀಕರಿಸಿ ವಾಸ್ತವದ ಅರ್ಥವನ್ನು ಮರೆಮಾಚುತ್ತಿವೆ.

ಒಬ್ಬ ಕಥೆಗಾರ ಅಥವಾ ಚಿತ್ರ ಕಥೆಗಾರ ತನ್ನ ಕಲ್ಪನೆ – ಅನುಭವದಲ್ಲಿ ಮೂಡಿದ ದೃಶ್ಯಗಳನ್ನು ಪ್ರೇಕ್ಷಕರಿಗೆ ತಲುಪಿಸಲು ಹಲವಾರು ಮಾರ್ಗಗಳನ್ನು ಉಪಯೋಗಿಸುತ್ತಾನೆ.
ಆದರೆ ಇದು ವ್ಯಾವಹಾರಿಕ ಪೈಪೋಟಿಯ ಮನರಂಜನಾ ಉದ್ಯಮವಾಗಿ ಮಾರ್ಪಟ್ಟಿರುವುದರಿಂದ ಅತಿಹೆಚ್ಚು ವೀಕ್ಷಕರನ್ನು ತಲುಪುವ – ಅವರನ್ನು ದೀರ್ಘಕಾಲ ಹಿಡಿದಿಟ್ಟುಕೊಳ್ಳವ – ಅದರಿಂದ ಬರುವ ಜಾಹೀರಾತು ಮುಖಾಂತರ ಹಣ ಗಳಿಸುವ ಪ್ರಲೋಭನೆಗೆ ಒಳಗಾಗುತ್ತಾನೆ.
ಅಲ್ಲಿಂದ ಶುರುವಾಗುತ್ತದೆ ನೋಡಿ ಈ ಮಾಯಾಜಾಲದ ವಿಕೃತಿಗಳು.

ಪ್ರತಿ ಪಾತ್ರಗಳನ್ನು ವಿಚಿತ್ರವಾಗಿ ಸೃಷ್ಟಿಸುವ, ಘಟನೆಗಳನ್ನು ಊಹೆಗೂ ನಿಲುಕದಂತೆ ಬೆಸೆಯುವ, ವರ್ತನೆಗಳನ್ನು ಅತಿರೇಕಕ್ಕೆ ಕೊಂಡೊಯ್ಯುವ, ಕುತೂಹಲಕ್ಕಾಗಿ ಸ್ಥಾಪಿತ ಮಾನವೀಯ ಮೌಲ್ಯಗಳನ್ನೇ ಉಲ್ಟಾ ಪಲ್ಟಾ ಮಾಡುವ ಅನೇಕ ಚಾಕಚಕ್ಯತೆಯ ಬಲೆ ಬೀಸಲಾಗುತ್ತದೆ.
ಅನೈತಿಕತೆಯನ್ನು ಚಾಣಾಕ್ಷವಾಗಿ ನಿಭಾಯಿಸುವ, ಕೊಲೆ ಮುಂತಾದ ಅಪರಾಧಗಳನ್ನು ವಾಸ್ತವ ಲೋಕಕ್ಕಿಂತ ಬರಹಗಾರನ ಅನುಕೂಲಕ್ಕೆ ತಕ್ಕಂತೆ ನಿರ್ವಹಿಸುವ ರೀತಿಗಳು ನಿಜ ಲೋಕದ ಅರಿವಿರದ ಜನರನ್ನು ಪ್ರಚೋದಿಸುತ್ತಿರುವುದು ನಮ್ಮ ದಿನನಿತ್ಯದ ನೇರ ಅರಿವಿಗೆ ಬರುತ್ತಿದೆ. ಇದು ಅತ್ಯಂತ ಅಪಾಯಕಾರಿ ಮಟ್ಟದಲ್ಲಿದೆ.

ಈಗ ಪ್ರಸಾರವಾಗುತ್ತಿರುವ ಬಹುತೇಕ ಧಾರವಾಹಿಗಳಲ್ಲಿ ಮಹಿಳೆಯರನ್ನು ವಿಲನ್ ಗಳಾಗಿ ಚಿತ್ರಿಸಿ ಆಕೆಯ ವ್ಯಕ್ತಿತ್ವವನ್ನೇ ಸಂಪೂರ್ಣ ಕೆಳಮಟ್ಟಕ್ಕೆ ಇಳಿಸುವ ಮೂಲಕ ಒಂದು ಸಾಂಪ್ರದಾಯಿಕ ವಾತಾವರಣವನ್ನೇ ಬಡಮೇಲು ಮಾಡಲಾಗಿದೆ. ಇಂದಿನ ಯುವ ಜನಾಂಗ ಮಹಿಳೆಯರ ಮೇಲೆ ಗೌರವ ಕಳೆದುಕೊಳ್ಳಲು ಇದು ಒಂದು ಕಾರಣವಾಗಿದೆ….

ಎಷ್ಟೋ ಮಹಿಳೆಯರು ಈಗಲೂ ಧಾರಾವಾಹಿಯ ಪಾತ್ರಗಳು ವರ್ತಿಸುವ ರೀತಿಯನ್ನು ದಿನನಿತ್ಯ ತಮ್ಮದೇ ಶೈಲಿಯಲ್ಲಿ ಚರ್ಚಿಸುತ್ತಾ, ಅದರ ಪ್ರಭಾವಕ್ಕೆ ಒಳಗಾಗಿ ತಮ್ಮ ನಡತೆಯ ಕೆಲವು ಕೆಟ್ಟ ಅಂಶಗಳನ್ನು ಸಮರ್ಥಿಸಿಕೊಳ್ಳತೊಡಗಿದ್ದಾರೆ. ಕೆಟ್ಟದ್ದಕ್ಕೆ ಮಾನಸಿಕ ಪ್ರೋತ್ಸಾಹ ದೊರೆತರೆ ಆ ಸಮಾಜ ದಾರಿ ತಪ್ಪುವ ಸಾಧ್ಯತೆ ಹೆಚ್ಚು.

ಮಾಧ್ಯಮಗಳನ್ನು ನಿಯಂತ್ರಿಸುವುದು ಸಾಧ್ಯವಿಲ್ಲ. ಆದರೆ ವೈಯಕ್ತಿಕ ಮಟ್ಟದಲ್ಲಿ ನಾವುಗಳು ಹೆಚ್ಚು ಪ್ರಬುದ್ಧರಾಗುವ ಮುಖಾಂತರ, ನಮ್ಮ ವ್ಯಕ್ತಿತ್ವಗಳನ್ನು ಉನ್ನತ ದರ್ಜೆಗೆ ಏರಿಸಿಕೊಳ್ಳುವ ಮೂಲಕ, ವಾಸ್ತವ ಚಿಂತನೆಗಳನ್ನು ಮೈಗೂಡಿಸಿಕೊಳ್ಳುವ ವಿಧಾನದಿಂದ ಇದನ್ನು ನಿರ್ಲಕ್ಷಿಸಬಹುದು ಮತ್ತು ಅನಾಹುತಗಳನ್ನು ತಡೆಯಬಹುದು.
ಆ ನಿಟ್ಟಿನಲ್ಲಿ ಮತ್ತಷ್ಟು ಕ್ರಿಯಾತ್ಮಕವಾಗಿ ಯೋಚಿಸಿ ಎಂದು ಮನವಿ ಮಾಡಿಕೊಳ್ಳುತ್ತಾ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

10 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

18 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

20 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

21 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago