Categories: ಲೇಖನ

ಧಾರಾವಾಹಿಗಳು ಎಂಬ ಮನರಂಜನಾ ಬಲೆಯೊಳಗೆ ನಮ್ಮ ಹೆಣ್ಣು ಮಕ್ಕಳು…..

ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಭಾರತೀಯ ಮಹಿಳೆಯರ ಮೇಲೆ ಅತಿ ಹೆಚ್ಚು ಪ್ರಭಾವ ಬೀರುತ್ತಿರುವುದು ಧಾರಾವಾಹಿಗಳೆಂಬ ಮಾಯಾಲೋಕ.,…………

ಹೆಚ್ಚು ಕಡಿಮೆ ಅವರ ಮನಸ್ಥಿತಿಯನ್ನು ನಿಯಂತ್ರಿಸುತ್ತಿದೆ. ಗಂಡಸರೂ ಧಾರಾವಾಹಿಗಳನ್ನು ನೋಡುತ್ತಾರಾದರು ಸಿನಿಮಾ ಹುಚ್ಚು ಸ್ವಲ್ಪ ಹೆಚ್ಚು. ಅದರಲ್ಲೂ ಯುವಕರ ಆದ್ಯತೆ ಚಲನಚಿತ್ರವೇ.
ಇದೊಂದು ಕೋಟ್ಯಾಂತರ ರೂಪಾಯಿಗಳ ಮನರಂಜನಾ ವ್ಯವಹಾರ.

ಆದರೆ ಈಗ ಆ ವ್ಯವಹಾರ ನಮ್ಮ ಮನೆಗಳಿಗೇ ಮುಖ್ಯವಾಗಿ ಕೌಟುಂಬಿಕ ಮೌಲ್ಯಗಳಿಗೇ ಕೈ ಹಾಕಿದೆ.
ವ್ಯಾವಹಾರಿಕ ಪೈಪೋಟಿಗಿಳಿದ ಅದರಲ್ಲೂ ಮುಖ್ಯವಾಗಿ ಟೆಲಿವಿಷನ್ ಮಾಧ್ಯಮ ಇನ್ನೂ ಬಹಳಷ್ಟು ವಿಷಯಗಳಲ್ಲಿ ಮಾನಸಿಕವಾಗಿ ಭ್ರೂಣಾವಸ್ಥೆಯಲ್ಲೇ ಇರುವ ಅನೇಕ ಮಹಿಳೆಯರ ಅಂತರಾಳಕ್ಕೆ ಲಗ್ಗೆ ಇಟ್ಟು ತಪ್ಪು ಸಂದೇಶಗಳನ್ನು ಹರಿಯಬಿಡುತ್ತಿದೆ.

ಹೆಣ್ಣು ಸಮಾಜದ ಮುಕ್ತತೆಗೆ ತೆರೆದುಕೊಳ್ಳುತ್ತಿರುವ, ಸ್ವಾತಂತ್ರ್ಯ ಮತ್ತು ಸಮಾನತೆಗಾಗಿ ಹೋರಾಡುತ್ತಿರುವ ಸಂದರ್ಭದಲ್ಲಿ ಕೆಟ್ಟ ಮೌಲ್ಯಗಳನ್ನು – ಅಮಾನವೀಯ ವರ್ತನೆಗಳನ್ನು ಸಮರ್ಥಿಸುವ,
ಅತಿರಂಜಿತ ಘಟನೆಗಳನ್ನು ವೈಭವೀಕರಿಸಿ ವಾಸ್ತವದ ಅರ್ಥವನ್ನು ಮರೆಮಾಚುತ್ತಿವೆ.

ಒಬ್ಬ ಕಥೆಗಾರ ಅಥವಾ ಚಿತ್ರ ಕಥೆಗಾರ ತನ್ನ ಕಲ್ಪನೆ – ಅನುಭವದಲ್ಲಿ ಮೂಡಿದ ದೃಶ್ಯಗಳನ್ನು ಪ್ರೇಕ್ಷಕರಿಗೆ ತಲುಪಿಸಲು ಹಲವಾರು ಮಾರ್ಗಗಳನ್ನು ಉಪಯೋಗಿಸುತ್ತಾನೆ.
ಆದರೆ ಇದು ವ್ಯಾವಹಾರಿಕ ಪೈಪೋಟಿಯ ಮನರಂಜನಾ ಉದ್ಯಮವಾಗಿ ಮಾರ್ಪಟ್ಟಿರುವುದರಿಂದ ಅತಿಹೆಚ್ಚು ವೀಕ್ಷಕರನ್ನು ತಲುಪುವ – ಅವರನ್ನು ದೀರ್ಘಕಾಲ ಹಿಡಿದಿಟ್ಟುಕೊಳ್ಳವ – ಅದರಿಂದ ಬರುವ ಜಾಹೀರಾತು ಮುಖಾಂತರ ಹಣ ಗಳಿಸುವ ಪ್ರಲೋಭನೆಗೆ ಒಳಗಾಗುತ್ತಾನೆ.
ಅಲ್ಲಿಂದ ಶುರುವಾಗುತ್ತದೆ ನೋಡಿ ಈ ಮಾಯಾಜಾಲದ ವಿಕೃತಿಗಳು.

ಪ್ರತಿ ಪಾತ್ರಗಳನ್ನು ವಿಚಿತ್ರವಾಗಿ ಸೃಷ್ಟಿಸುವ, ಘಟನೆಗಳನ್ನು ಊಹೆಗೂ ನಿಲುಕದಂತೆ ಬೆಸೆಯುವ, ವರ್ತನೆಗಳನ್ನು ಅತಿರೇಕಕ್ಕೆ ಕೊಂಡೊಯ್ಯುವ, ಕುತೂಹಲಕ್ಕಾಗಿ ಸ್ಥಾಪಿತ ಮಾನವೀಯ ಮೌಲ್ಯಗಳನ್ನೇ ಉಲ್ಟಾ ಪಲ್ಟಾ ಮಾಡುವ ಅನೇಕ ಚಾಕಚಕ್ಯತೆಯ ಬಲೆ ಬೀಸಲಾಗುತ್ತದೆ.
ಅನೈತಿಕತೆಯನ್ನು ಚಾಣಾಕ್ಷವಾಗಿ ನಿಭಾಯಿಸುವ, ಕೊಲೆ ಮುಂತಾದ ಅಪರಾಧಗಳನ್ನು ವಾಸ್ತವ ಲೋಕಕ್ಕಿಂತ ಬರಹಗಾರನ ಅನುಕೂಲಕ್ಕೆ ತಕ್ಕಂತೆ ನಿರ್ವಹಿಸುವ ರೀತಿಗಳು ನಿಜ ಲೋಕದ ಅರಿವಿರದ ಜನರನ್ನು ಪ್ರಚೋದಿಸುತ್ತಿರುವುದು ನಮ್ಮ ದಿನನಿತ್ಯದ ನೇರ ಅರಿವಿಗೆ ಬರುತ್ತಿದೆ. ಇದು ಅತ್ಯಂತ ಅಪಾಯಕಾರಿ ಮಟ್ಟದಲ್ಲಿದೆ.

ಈಗ ಪ್ರಸಾರವಾಗುತ್ತಿರುವ ಬಹುತೇಕ ಧಾರವಾಹಿಗಳಲ್ಲಿ ಮಹಿಳೆಯರನ್ನು ವಿಲನ್ ಗಳಾಗಿ ಚಿತ್ರಿಸಿ ಆಕೆಯ ವ್ಯಕ್ತಿತ್ವವನ್ನೇ ಸಂಪೂರ್ಣ ಕೆಳಮಟ್ಟಕ್ಕೆ ಇಳಿಸುವ ಮೂಲಕ ಒಂದು ಸಾಂಪ್ರದಾಯಿಕ ವಾತಾವರಣವನ್ನೇ ಬಡಮೇಲು ಮಾಡಲಾಗಿದೆ. ಇಂದಿನ ಯುವ ಜನಾಂಗ ಮಹಿಳೆಯರ ಮೇಲೆ ಗೌರವ ಕಳೆದುಕೊಳ್ಳಲು ಇದು ಒಂದು ಕಾರಣವಾಗಿದೆ….

ಎಷ್ಟೋ ಮಹಿಳೆಯರು ಈಗಲೂ ಧಾರಾವಾಹಿಯ ಪಾತ್ರಗಳು ವರ್ತಿಸುವ ರೀತಿಯನ್ನು ದಿನನಿತ್ಯ ತಮ್ಮದೇ ಶೈಲಿಯಲ್ಲಿ ಚರ್ಚಿಸುತ್ತಾ, ಅದರ ಪ್ರಭಾವಕ್ಕೆ ಒಳಗಾಗಿ ತಮ್ಮ ನಡತೆಯ ಕೆಲವು ಕೆಟ್ಟ ಅಂಶಗಳನ್ನು ಸಮರ್ಥಿಸಿಕೊಳ್ಳತೊಡಗಿದ್ದಾರೆ. ಕೆಟ್ಟದ್ದಕ್ಕೆ ಮಾನಸಿಕ ಪ್ರೋತ್ಸಾಹ ದೊರೆತರೆ ಆ ಸಮಾಜ ದಾರಿ ತಪ್ಪುವ ಸಾಧ್ಯತೆ ಹೆಚ್ಚು.

ಮಾಧ್ಯಮಗಳನ್ನು ನಿಯಂತ್ರಿಸುವುದು ಸಾಧ್ಯವಿಲ್ಲ. ಆದರೆ ವೈಯಕ್ತಿಕ ಮಟ್ಟದಲ್ಲಿ ನಾವುಗಳು ಹೆಚ್ಚು ಪ್ರಬುದ್ಧರಾಗುವ ಮುಖಾಂತರ, ನಮ್ಮ ವ್ಯಕ್ತಿತ್ವಗಳನ್ನು ಉನ್ನತ ದರ್ಜೆಗೆ ಏರಿಸಿಕೊಳ್ಳುವ ಮೂಲಕ, ವಾಸ್ತವ ಚಿಂತನೆಗಳನ್ನು ಮೈಗೂಡಿಸಿಕೊಳ್ಳುವ ವಿಧಾನದಿಂದ ಇದನ್ನು ನಿರ್ಲಕ್ಷಿಸಬಹುದು ಮತ್ತು ಅನಾಹುತಗಳನ್ನು ತಡೆಯಬಹುದು.
ಆ ನಿಟ್ಟಿನಲ್ಲಿ ಮತ್ತಷ್ಟು ಕ್ರಿಯಾತ್ಮಕವಾಗಿ ಯೋಚಿಸಿ ಎಂದು ಮನವಿ ಮಾಡಿಕೊಳ್ಳುತ್ತಾ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ.

Ramesh Babu

Journalist

Recent Posts

ಭಾರೀ ಸಿಡಿಲಿಗೆ ಎರಡು ಸೀಮೆ ಹಸುಗಳ ಸಾವು

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಾವಲಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪ ಮಂಗಳವಾರ ಸಂಜೆ ಸಿಡಿಲು ಬಡಿದ ಪರಿಣಾಮ ಎರಡು…

6 hours ago

56,432 ಹುದ್ದೆಗಳ ನೇರ ನೇಮಕಾತಿಗಾಗಿ ತುರ್ತು ಕ್ರಮ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲು ನೀಡುವ ವಿಚಾರದಲ್ಲಿ ನಮ್ಮ ಸರ್ಕಾರವು ಕೈಗೊಂಡಿರುವ ಮಹತ್ವದ ನಿರ್ಧಾರದ ಅನ್ವಯ ಮಾನ್ಯ ಉಚ್ಚ ನ್ಯಾಯಾಲಯದ ಆದೇಶಕ್ಕೆ…

8 hours ago

ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ

ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವಾರಗಳ ಫ್ಯಾಷನ್ ಡಿಸೈನ್/ಬ್ಯೂಟಿಷಿಯನ್ ಕೌಶಲ್ಯ ಆಧಾರಿತ ಉದ್ಯಮಶೀಲತಾ ಕಾರ್ಯಕ್ರಮವನ್ನು ಮೇ ತಿಂಗಳ ಮೊದಲನೇ…

8 hours ago

ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ದುರ್ಮರಣ ಪ್ರಕರಣ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…

18 hours ago

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

2 days ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

2 days ago