ಇಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ಅವರ ಜನ್ಮದಿನ ಹಿನ್ನೆಲೆ ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು ಹುಟ್ಟುಹಬ್ಬದ ಶುಭಾಶಯ ತಿಳಿಸಿ ಶುಭಕೋರಿದರು.
ಅದರಂತೆ ಹಳೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಗ್ರಾಮಸ್ಥರು ಸೇರಿದಂತೆ ಇತರರು ಶಾಸಕ ಧೀರಜ್ ಮುನಿರಾಜ್ ಅವರ ಜನ್ಮದಿನದ ಶುಭಾಷಯ ಕೋರಿದರು.
ಶುಭಕೋರಿ ಮಾತನಾಡಿದ ಹಳೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹನುಮಂತಯ್ಯ ಟಿ ಅವರು, ಶಾಸಕ ಧೀರಜ್ ಮುನಿರಾಜ್ ಅವರು ನವ ದೊಡ್ಡಬಳ್ಳಾಪುರ ಕನಸು ಕಂಡು ಅದನ್ನು ನನಸಾಗಿಸಲು ಸತತ ಪ್ರಯತ್ನಪಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಅಹಿಂದಾ ನಾಯಕರಾಗಿ ಹೊರಹೊಮ್ಮುವ ಎಲ್ಲಾ ಸಾಧ್ಯತೆಗಳಿವೆ. ದಲಿತಪರ, ರೈತಪರ, ಕಾರ್ಮಿಕರ ಪರ, ನೇಕಾರರ ಪರ ಹಾಗೂ ಯಾವುದೇ ಜಾತಿ ಭೇದ ಮಾಡದೇ ಎಲ್ಲರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ಇಂತಹ ಜನನಾಯಕನನ್ನ ಪಡೆದುಕೊಂಡಿರುವುದೇ ನಮ್ಮ ಪುಣ್ಯ, ಭ್ರಷ್ಟಮುಕ್ತ ಆಡಳಿತ ಸೇವೆ ಮಾಡಬೇಕು, ಸದನದಲ್ಲಿ ದೊಡ್ಡಬಳ್ಳಾಪುರ ಅಭಿವೃದ್ಧಿಗೆ ಸಾಕಷ್ಟು ಸರ್ಕಾರ ಬಳಿ ಮನವಿ ಮಾಡುತ್ತಿದ್ದಾರೆ ಎಂದು ಹೇಳಿದರು.
ಈ ವೇಳೆ ಹಳೇಕೋಟೆ ಬಿಜೆಪಿ ಮುಖಂಡರಾದ ಟಿ ಡಿ ಮುನಿಯಪ್ಪ, ಮುನಿಶ್ಯಾಮಯ್ಯ, ಸಿದ್ಧರಾಜು, ಚಲುವರಾಜು, ಕೆಂಪರಾಜು, ಕಾರ್ಯಕರ್ತರು, ಗ್ರಾಮಸ್ಥರು ಸೇರಿದಂತೆ ಇತರರು ಇದ್ದರು…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…