ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ ಘಟನೆ ನಡೆದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಜಿಂಕೆಯ ಮೃತದೇಹವನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿದ ದೊಡ್ಡರಾಯಪ್ಪನಹಳ್ಳಿ ಗ್ರಾಮದ ರೈತ ಚನ್ನೇಗೌಡ, ನಂದಿಗಿರಿ ಶ್ರೇಣಿಯ ಬೆಟ್ಟಗಳಲ್ಲಿ ಸಾಕಷ್ಟು ಚಿರತೆ ಹಾಗೂ ಜಿಂಕೆಗಳು ವಾಸಿಸುತ್ತಿದ್ದು, ಈ ಹಿಂದೆ ಅವು ಗ್ರಾಮಗಳ ಕಡೆಗೆ ಬರುತ್ತಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ನಂದಿಗಿರಿ ಶ್ರೇಣಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಬೃಹತ್ ಪ್ರಮಾಣದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಹಾಗೂ ಸ್ಪೋಟಕಗಳ ಬಳಕೆಯಿಂದ ಉಂಟಾಗುವ ಭಾರೀ ಶಬ್ದಕ್ಕೆ ಹೆದರಿ ಕಾಡುಪ್ರಾಣಿಗಳು ಗ್ರಾಮಗಳತ್ತ ಬರುತ್ತಿವೆ ಎಂದು ಆರೋಪಿಸಿದರು.

ಗ್ರಾಮಕ್ಕೆ ಬಂದ ಜಿಂಕೆಗಳು ಬೀದಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳುವ ವೇಳೆ ರಸ್ತೆ ದಾಟಲು ಯತ್ನಿಸಿ ವಾಹನಗಳಿಗೆ ಸಿಲುಕಿ ಸಾವನ್ನಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ಘಟನೆ ಕೂಡ ಅದೇ ಕಾರಣದಿಂದ ಸಂಭವಿಸಿರಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಕಲ್ಲು ಗಣಿಗಾರಿಕೆಯಲ್ಲಿ ಅತಿಯಾದ ಪ್ರಮಾಣದಲ್ಲಿ ಸ್ಪೋಟಕಗಳನ್ನು ಬಳಸುವುದನ್ನು ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಾಗಿ ನಿಯಂತ್ರಿಸಿ, ವನ್ಯಜೀವಿಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

11 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

11 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

16 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

22 hours ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

23 hours ago

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…

2 days ago