ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ ಘಟನೆ ನಡೆದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಜಿಂಕೆಯ ಮೃತದೇಹವನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿದ ದೊಡ್ಡರಾಯಪ್ಪನಹಳ್ಳಿ ಗ್ರಾಮದ ರೈತ ಚನ್ನೇಗೌಡ, ನಂದಿಗಿರಿ ಶ್ರೇಣಿಯ ಬೆಟ್ಟಗಳಲ್ಲಿ ಸಾಕಷ್ಟು ಚಿರತೆ ಹಾಗೂ ಜಿಂಕೆಗಳು ವಾಸಿಸುತ್ತಿದ್ದು, ಈ ಹಿಂದೆ ಅವು ಗ್ರಾಮಗಳ ಕಡೆಗೆ ಬರುತ್ತಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ನಂದಿಗಿರಿ ಶ್ರೇಣಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಬೃಹತ್ ಪ್ರಮಾಣದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಹಾಗೂ ಸ್ಪೋಟಕಗಳ ಬಳಕೆಯಿಂದ ಉಂಟಾಗುವ ಭಾರೀ ಶಬ್ದಕ್ಕೆ ಹೆದರಿ ಕಾಡುಪ್ರಾಣಿಗಳು ಗ್ರಾಮಗಳತ್ತ ಬರುತ್ತಿವೆ ಎಂದು ಆರೋಪಿಸಿದರು.

ಗ್ರಾಮಕ್ಕೆ ಬಂದ ಜಿಂಕೆಗಳು ಬೀದಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳುವ ವೇಳೆ ರಸ್ತೆ ದಾಟಲು ಯತ್ನಿಸಿ ವಾಹನಗಳಿಗೆ ಸಿಲುಕಿ ಸಾವನ್ನಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ಘಟನೆ ಕೂಡ ಅದೇ ಕಾರಣದಿಂದ ಸಂಭವಿಸಿರಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಕಲ್ಲು ಗಣಿಗಾರಿಕೆಯಲ್ಲಿ ಅತಿಯಾದ ಪ್ರಮಾಣದಲ್ಲಿ ಸ್ಪೋಟಕಗಳನ್ನು ಬಳಸುವುದನ್ನು ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಾಗಿ ನಿಯಂತ್ರಿಸಿ, ವನ್ಯಜೀವಿಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

4 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

10 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

16 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

17 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago