“ಬೆಟ್ಟ ಅಗೆದು ಇಲಿ ಹಿಡಿದರು” ಎಂಬ ಗಾದೆ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಬಹಳ ಚೆನ್ನಾಗಿ ಅನ್ವಯಿಸುತ್ತದೆ. ನಂದಿ ಬೆಟ್ಟದಲ್ಲಿ ಸಂಪುಟ ಸಭೆ ಮಾಡುತ್ತೇವೆ ಎಂದು ಘೋಷಣೆ ಮಾಡಿ ಭರ್ಜರಿ ತಯಾರಿ ನಡೆಸಿದ್ದ ಕಾಂಗ್ರೆಸ್ ಸರ್ಕಾರ ನಿನ್ನೆ ಇದ್ದಕ್ಕಿದ್ದಂತೆ ಕೊನೆ ಕ್ಷಣದಲ್ಲಿ ನಂದಿ ಬೆಟ್ಟದಲ್ಲಿ ಇಂದು ನಡೆಯಬೇಕಿದ್ದ ಸಂಪುಟ ಸಭೆಯನ್ನು ರದ್ದು ಮಾಡಿ ವಿಧಾನಸೌಧಕ್ಕೆ ಸ್ಥಳಾಂತರ ಮಾಡಿದೆ.
ಇದಕ್ಕೆ ಕಾರಣ ಏನಪ್ಪಾ ಅಂದರೆ, ತನ್ನ ಅವೈಜ್ಞಾನಿಕ ನೀತಿಗಳು, ಮಿತಿಮೀರಿದ ಭ್ರಷ್ಟಾಚಾರ, ದುರಾಡಳಿತದಿಂದ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿ ದಿವಾಳಿ ಮಾಡಿರುವ ಕಾಂಗ್ರೆಸ್ ಸರ್ಕಾರದ ಬಳಿ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಘೋಷಣೆ ಮಾಡಲು ನಯಾ ಪೈಸೆ ಹಣವೂ ಇಲ್ಲ, ಬದ್ಧತೆಯೂ ಇಲ್ಲ, ಯಾವ ಹೊಸ ಆಲೋಚನೆಗಳೂ ಇಲ್ಲ.
ಹುರುಳಿಲ್ಲದ ಪ್ರಚಾರದಿಂದ, ಸತ್ವವಿಲ್ಲದ ಸಂಪುಟ ಸಭೆಗಳಿಂದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಜನರ ಕಣ್ಣಿಗೆ ಮಂಕುಬೂದಿ ಎರಚಲು ಸಾಧ್ಯವಿಲ್ಲ ಎನ್ನುವ ಸತ್ಯ ಕಾಂಗ್ರೆಸ್ ಸರ್ಕಾರಕ್ಕೆ ಕಡೆಗೂ ಜ್ಞಾನೋದಯ ಆದಂತಿದೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…