“ಬೆಟ್ಟ ಅಗೆದು ಇಲಿ ಹಿಡಿದರು” ಎಂಬ ಗಾದೆ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಬಹಳ ಚೆನ್ನಾಗಿ ಅನ್ವಯಿಸುತ್ತದೆ. ನಂದಿ ಬೆಟ್ಟದಲ್ಲಿ ಸಂಪುಟ ಸಭೆ ಮಾಡುತ್ತೇವೆ ಎಂದು ಘೋಷಣೆ ಮಾಡಿ ಭರ್ಜರಿ ತಯಾರಿ ನಡೆಸಿದ್ದ ಕಾಂಗ್ರೆಸ್ ಸರ್ಕಾರ ನಿನ್ನೆ ಇದ್ದಕ್ಕಿದ್ದಂತೆ ಕೊನೆ ಕ್ಷಣದಲ್ಲಿ ನಂದಿ ಬೆಟ್ಟದಲ್ಲಿ ಇಂದು ನಡೆಯಬೇಕಿದ್ದ ಸಂಪುಟ ಸಭೆಯನ್ನು ರದ್ದು ಮಾಡಿ ವಿಧಾನಸೌಧಕ್ಕೆ ಸ್ಥಳಾಂತರ ಮಾಡಿದೆ.
ಇದಕ್ಕೆ ಕಾರಣ ಏನಪ್ಪಾ ಅಂದರೆ, ತನ್ನ ಅವೈಜ್ಞಾನಿಕ ನೀತಿಗಳು, ಮಿತಿಮೀರಿದ ಭ್ರಷ್ಟಾಚಾರ, ದುರಾಡಳಿತದಿಂದ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿ ದಿವಾಳಿ ಮಾಡಿರುವ ಕಾಂಗ್ರೆಸ್ ಸರ್ಕಾರದ ಬಳಿ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಘೋಷಣೆ ಮಾಡಲು ನಯಾ ಪೈಸೆ ಹಣವೂ ಇಲ್ಲ, ಬದ್ಧತೆಯೂ ಇಲ್ಲ, ಯಾವ ಹೊಸ ಆಲೋಚನೆಗಳೂ ಇಲ್ಲ.
ಹುರುಳಿಲ್ಲದ ಪ್ರಚಾರದಿಂದ, ಸತ್ವವಿಲ್ಲದ ಸಂಪುಟ ಸಭೆಗಳಿಂದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಜನರ ಕಣ್ಣಿಗೆ ಮಂಕುಬೂದಿ ಎರಚಲು ಸಾಧ್ಯವಿಲ್ಲ ಎನ್ನುವ ಸತ್ಯ ಕಾಂಗ್ರೆಸ್ ಸರ್ಕಾರಕ್ಕೆ ಕಡೆಗೂ ಜ್ಞಾನೋದಯ ಆದಂತಿದೆ.
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…