“ಬೆಟ್ಟ ಅಗೆದು ಇಲಿ ಹಿಡಿದರು” ಎಂಬ ಗಾದೆ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಬಹಳ ಚೆನ್ನಾಗಿ ಅನ್ವಯಿಸುತ್ತದೆ. ನಂದಿ ಬೆಟ್ಟದಲ್ಲಿ ಸಂಪುಟ ಸಭೆ ಮಾಡುತ್ತೇವೆ ಎಂದು ಘೋಷಣೆ ಮಾಡಿ ಭರ್ಜರಿ ತಯಾರಿ ನಡೆಸಿದ್ದ ಕಾಂಗ್ರೆಸ್ ಸರ್ಕಾರ ನಿನ್ನೆ ಇದ್ದಕ್ಕಿದ್ದಂತೆ ಕೊನೆ ಕ್ಷಣದಲ್ಲಿ ನಂದಿ ಬೆಟ್ಟದಲ್ಲಿ ಇಂದು ನಡೆಯಬೇಕಿದ್ದ ಸಂಪುಟ ಸಭೆಯನ್ನು ರದ್ದು ಮಾಡಿ ವಿಧಾನಸೌಧಕ್ಕೆ ಸ್ಥಳಾಂತರ ಮಾಡಿದೆ.
ಇದಕ್ಕೆ ಕಾರಣ ಏನಪ್ಪಾ ಅಂದರೆ, ತನ್ನ ಅವೈಜ್ಞಾನಿಕ ನೀತಿಗಳು, ಮಿತಿಮೀರಿದ ಭ್ರಷ್ಟಾಚಾರ, ದುರಾಡಳಿತದಿಂದ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿ ದಿವಾಳಿ ಮಾಡಿರುವ ಕಾಂಗ್ರೆಸ್ ಸರ್ಕಾರದ ಬಳಿ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಘೋಷಣೆ ಮಾಡಲು ನಯಾ ಪೈಸೆ ಹಣವೂ ಇಲ್ಲ, ಬದ್ಧತೆಯೂ ಇಲ್ಲ, ಯಾವ ಹೊಸ ಆಲೋಚನೆಗಳೂ ಇಲ್ಲ.
ಹುರುಳಿಲ್ಲದ ಪ್ರಚಾರದಿಂದ, ಸತ್ವವಿಲ್ಲದ ಸಂಪುಟ ಸಭೆಗಳಿಂದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಜನರ ಕಣ್ಣಿಗೆ ಮಂಕುಬೂದಿ ಎರಚಲು ಸಾಧ್ಯವಿಲ್ಲ ಎನ್ನುವ ಸತ್ಯ ಕಾಂಗ್ರೆಸ್ ಸರ್ಕಾರಕ್ಕೆ ಕಡೆಗೂ ಜ್ಞಾನೋದಯ ಆದಂತಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…