ನಕಲಿ ಅಂಕಪಟ್ಟಿ ಸೃಷ್ಟಿಸಿ ಅಂಚೆ ಇಲಾಖೆಯಲ್ಲಿ ನೌಕರಿ ಪಡೆದು ಸರಕಾರಕ್ಕೆ ವಂಚಿಸಿದ್ದ ಅಪರಾಧಕ್ಕಾಗಿ ವ್ಯಕ್ತಿಯೊಬ್ಬನಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿ ಮಡಿಕೇರಿಯ ಸಿವಿಲ್ ಜಡ್ಜ್ ಮತ್ತು ಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ.
ಕಾರೆಕಾಡು ಗ್ರಾಮದ ಎಂ.ಬಿ. ಸಂದೇಶ (32) ಎಂಬಾತ ಅಂಚೆ ಇಲಾಖೆಯಲ್ಲಿ 2019ನೇ ಸಾಲಿನಲ್ಲಿ ನಡೆದ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಯ ನೇಮಕಾತಿಯಲ್ಲಿ ಆನ್ ಲೈನ್ ಮುಖಾಂತರ ಅರ್ಜಿಯೊಂದಿಗೆ ಸಲ್ಲಿಸಿರುವ ದಾಖಲೆಗಳಲ್ಲಿ ನಕಲಿ ಅಂಕಪಟ್ಟಿಯನ್ನು ಸಲ್ಲಿಸಿರುವುದು ಪರಿಶೀಲನೆ ವೇಳೆ ಕಂಡುಬಂದಿತ್ತು.
ಹೀಗಾಗಿ ಈತನ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಈತನನ್ನು 2022ರ ಫೆ. 25 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಪ್ರಕರಣದ ತನಿಖಾಧಿಕಾರಿ ಪಿಎಸ್ ಐ ಶ್ರೀನಿವಾಸ್ ಮತ್ತು ಸಹಾಯಕ ತನಿಖಾಧಿಕಾರಿ ಹೆಚ್.ಸಿ. ದಿವ್ಯಾ ಅವರು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಡಿಕೇರಿಯ ಸಿವಿಲ್ ಜಡ್ಜ್ ಮತ್ತು ಸಿಜೆಎಂ ನ್ಯಾಯಾಲಯದ ನ್ಯಾಯಧೀಶರಾದ ಜಯಲಕ್ಷ್ಮಿ ಅವರು ಆರೋಪ ಸಾಬೀತಾದ ಹಿನ್ನೆಲೆ ಆರೋಪಿ ಸಂದೇಶನಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರಿ ಅಭಿಯೋಜಕರಾದ ಬಿ.ಎಸ್. ಸಂತೋಷ್ ಅವರು ಸರಕಾರದ ಪರ ವಾದ ಮಂಡಿಸಿದ್ದರು.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…