ನಕಲಿ ಅಂಕಪಟ್ಟಿ ಸೃಷ್ಟಿಸಿ ಅಂಚೆ ಇಲಾಖೆಯಲ್ಲಿ ನೌಕರಿ ಪಡೆದು ಸರಕಾರಕ್ಕೆ ವಂಚಿಸಿದ್ದ ಅಪರಾಧಕ್ಕಾಗಿ ವ್ಯಕ್ತಿಯೊಬ್ಬನಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿ ಮಡಿಕೇರಿಯ ಸಿವಿಲ್ ಜಡ್ಜ್ ಮತ್ತು ಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ.
ಕಾರೆಕಾಡು ಗ್ರಾಮದ ಎಂ.ಬಿ. ಸಂದೇಶ (32) ಎಂಬಾತ ಅಂಚೆ ಇಲಾಖೆಯಲ್ಲಿ 2019ನೇ ಸಾಲಿನಲ್ಲಿ ನಡೆದ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಯ ನೇಮಕಾತಿಯಲ್ಲಿ ಆನ್ ಲೈನ್ ಮುಖಾಂತರ ಅರ್ಜಿಯೊಂದಿಗೆ ಸಲ್ಲಿಸಿರುವ ದಾಖಲೆಗಳಲ್ಲಿ ನಕಲಿ ಅಂಕಪಟ್ಟಿಯನ್ನು ಸಲ್ಲಿಸಿರುವುದು ಪರಿಶೀಲನೆ ವೇಳೆ ಕಂಡುಬಂದಿತ್ತು.
ಹೀಗಾಗಿ ಈತನ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಈತನನ್ನು 2022ರ ಫೆ. 25 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಪ್ರಕರಣದ ತನಿಖಾಧಿಕಾರಿ ಪಿಎಸ್ ಐ ಶ್ರೀನಿವಾಸ್ ಮತ್ತು ಸಹಾಯಕ ತನಿಖಾಧಿಕಾರಿ ಹೆಚ್.ಸಿ. ದಿವ್ಯಾ ಅವರು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಡಿಕೇರಿಯ ಸಿವಿಲ್ ಜಡ್ಜ್ ಮತ್ತು ಸಿಜೆಎಂ ನ್ಯಾಯಾಲಯದ ನ್ಯಾಯಧೀಶರಾದ ಜಯಲಕ್ಷ್ಮಿ ಅವರು ಆರೋಪ ಸಾಬೀತಾದ ಹಿನ್ನೆಲೆ ಆರೋಪಿ ಸಂದೇಶನಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರಿ ಅಭಿಯೋಜಕರಾದ ಬಿ.ಎಸ್. ಸಂತೋಷ್ ಅವರು ಸರಕಾರದ ಪರ ವಾದ ಮಂಡಿಸಿದ್ದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…