ನಕಲಿ ಚಿನ್ನವನ್ನು ಅಸಲಿ ಚಿನ್ನವೆಂದು ಲಕ್ಷಾಂತರ ರೂ. ಗೆ ಮಾರಾಟ: ಜನರಿಗೆ ಮೋಸ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್

ನಕಲಿ ಚಿನ್ನವನ್ನು ಅಸಲಿ ಚಿನ್ನವೆಂದು ಮಾರಾಟ ಮಾಡಿದ್ದ‌ ಕೋಲಾರದ ಖತರ್ನಾಕ್ ಗ್ಯಾಂಗ್ ಹೊಸಕೋಟೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಈ ಕೋಲಾರದ ಖತರ್ನಾಕ್ ಗ್ಯಾಂಗ್ ಹೊಸಕೋಟೆ, ನಂದಗುಡಿ, ಶಿಡ್ಲಘಟ್ಟದಲ್ಲಿ ಎಂಟು ಮಂದಿಗೆ 65 ಲಕ್ಷ ವಂಚನೆ ಮಾಡಿದ್ದಾರೆ. ಬೆಂಗಳೂರು ಹೊರಹೊಲಯವೇ ಇವರ ಟಾರ್ಗೆಟ್ ಏರಿಯಾಗಳು..

ತಾಲೂಕು ಕಚೇರಿ, ಹೋಟೆಲ್ ಗಳ ಬಳಿ ತೆಲುಗು ಭಾಷೆ ಮಾತಾಡೋರೇ ಇವರ ಬಂಡವಾಳ.. ಆತ್ಮೀಯ ಪರಿಚಿತರಂತೆ ಬಿಲ್ಡಪ್ ಕೊಟ್ಟು ಬ್ರೈನ್ ವಾಶ್ ಮಾಡಿ, ಕೇರಳದ ಒಂದು ಜಾಗದಲ್ಲಿ ಭೂಮಿ ಕೆಲಸ ಮಾಡುವಾಗ ಚಿನ್ನದ ಹಾರ ಸಿಕ್ಕಿದೆ..ಅದು ರಾಜಮಹಾರಾಜರ ಕಾಲದ ಚಿನ್ನದ ಹಾರ, ಈಗಿನ ಚಿನ್ನದ ರೇಟಿಗಿಂತ ಹೆಚ್ಚು.. ಹೀಗೆ ವ್ಯಕ್ತಿಗಳನ್ನ ಬ್ರೈನ್ ವಾಶ್ ಮಾಡಿ ಮೊಬೈಲ್ ನಲ್ಲಿ ನಕಲಿ ಚಿನ್ನದ ಹಾರವನ್ನು ತೋರಿಸೋದು.. ನಂಬಿಕೆ ಬರಲಿ ಅಂತ ಎರಡು ಚಿನ್ನದ ಅಸಲಿ ಗುಂಡುಗಳನ್ನ ತೋರಿಸಿ ಇದು ಸರದ ತುದಿಯ ಗುಂಡುಗಳು ಎಂದು ನಂಬಿಕೆ ಬರುವಂತೆ ಚರ್ಚೆ ಮಾಡೋದು, ಎಂಟು ಕೆಜಿ ಚಿನ್ನದ ಹಾರವನ್ನು ಕಡಿಮೆ ಬೆಲೆಗೆ ಕೊಡ್ತೇವೆಂದು ಯಾಮಾರಿಸಿ ಹಣ ಪಡೆದು ವಂಚನೆ ಮಾಡುತ್ತಿದ್ದ ಈ‌ ಗ್ಯಾಂಗ್.

ಎಲ್ಲಾ ಮೊಬೈಲ್ ನಲ್ಲೇ ನೋಡಿ ವಿಡಿಯೋ ಕಾಲ್ ಮೂಲಕ ಜಾಗ ಫಿಕ್ಸ್ ಮಾಡಿ, ಈ ಮೂಲಕ ನಕಲಿ ಚಿನ್ನದ ಸರವನ್ನು ಅಸಲಿ ಚಿನ್ನದ ಸರ ಅಂತ ಕೊಟ್ಟು ಎಸ್ಕೇಪ್ ಆಗೋದು ಇವರ ಕೆಲಸ. ಮನೆಗೆ ಹೋಗಿ ಪರಿಶೀಲಿಸಿದ್ದ ಹಣ ಕೊಟ್ಟಿದ್ದ ವ್ಯಕ್ತಿಗಳು ಶಾಕ್ ಆಗುತ್ತಿತ್ತು.

ಮೋಸ ಹೋದ ವಿಷಯ ಗೊತ್ತಾಗಿ ಹೊಸಕೋಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಸದ್ಯ ಪೊಲೀಸರಿಂದ ಪ್ರಮುಖ ಆರೋಪಿ ರಾಜೇಶ್ ಎಂಬಾತ ಸೇರಿ ನಾಲ್ವರ ಬಂಧನ ಮಾಡಲಾಗಿದೆ….

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

8 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

8 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago