ನಕಲಿ ಚಿನ್ನವನ್ನು ಅಸಲಿ ಚಿನ್ನವೆಂದು ಲಕ್ಷಾಂತರ ರೂ. ಗೆ ಮಾರಾಟ: ಜನರಿಗೆ ಮೋಸ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್

ನಕಲಿ ಚಿನ್ನವನ್ನು ಅಸಲಿ ಚಿನ್ನವೆಂದು ಮಾರಾಟ ಮಾಡಿದ್ದ‌ ಕೋಲಾರದ ಖತರ್ನಾಕ್ ಗ್ಯಾಂಗ್ ಹೊಸಕೋಟೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಈ ಕೋಲಾರದ ಖತರ್ನಾಕ್ ಗ್ಯಾಂಗ್ ಹೊಸಕೋಟೆ, ನಂದಗುಡಿ, ಶಿಡ್ಲಘಟ್ಟದಲ್ಲಿ ಎಂಟು ಮಂದಿಗೆ 65 ಲಕ್ಷ ವಂಚನೆ ಮಾಡಿದ್ದಾರೆ. ಬೆಂಗಳೂರು ಹೊರಹೊಲಯವೇ ಇವರ ಟಾರ್ಗೆಟ್ ಏರಿಯಾಗಳು..

ತಾಲೂಕು ಕಚೇರಿ, ಹೋಟೆಲ್ ಗಳ ಬಳಿ ತೆಲುಗು ಭಾಷೆ ಮಾತಾಡೋರೇ ಇವರ ಬಂಡವಾಳ.. ಆತ್ಮೀಯ ಪರಿಚಿತರಂತೆ ಬಿಲ್ಡಪ್ ಕೊಟ್ಟು ಬ್ರೈನ್ ವಾಶ್ ಮಾಡಿ, ಕೇರಳದ ಒಂದು ಜಾಗದಲ್ಲಿ ಭೂಮಿ ಕೆಲಸ ಮಾಡುವಾಗ ಚಿನ್ನದ ಹಾರ ಸಿಕ್ಕಿದೆ..ಅದು ರಾಜಮಹಾರಾಜರ ಕಾಲದ ಚಿನ್ನದ ಹಾರ, ಈಗಿನ ಚಿನ್ನದ ರೇಟಿಗಿಂತ ಹೆಚ್ಚು.. ಹೀಗೆ ವ್ಯಕ್ತಿಗಳನ್ನ ಬ್ರೈನ್ ವಾಶ್ ಮಾಡಿ ಮೊಬೈಲ್ ನಲ್ಲಿ ನಕಲಿ ಚಿನ್ನದ ಹಾರವನ್ನು ತೋರಿಸೋದು.. ನಂಬಿಕೆ ಬರಲಿ ಅಂತ ಎರಡು ಚಿನ್ನದ ಅಸಲಿ ಗುಂಡುಗಳನ್ನ ತೋರಿಸಿ ಇದು ಸರದ ತುದಿಯ ಗುಂಡುಗಳು ಎಂದು ನಂಬಿಕೆ ಬರುವಂತೆ ಚರ್ಚೆ ಮಾಡೋದು, ಎಂಟು ಕೆಜಿ ಚಿನ್ನದ ಹಾರವನ್ನು ಕಡಿಮೆ ಬೆಲೆಗೆ ಕೊಡ್ತೇವೆಂದು ಯಾಮಾರಿಸಿ ಹಣ ಪಡೆದು ವಂಚನೆ ಮಾಡುತ್ತಿದ್ದ ಈ‌ ಗ್ಯಾಂಗ್.

ಎಲ್ಲಾ ಮೊಬೈಲ್ ನಲ್ಲೇ ನೋಡಿ ವಿಡಿಯೋ ಕಾಲ್ ಮೂಲಕ ಜಾಗ ಫಿಕ್ಸ್ ಮಾಡಿ, ಈ ಮೂಲಕ ನಕಲಿ ಚಿನ್ನದ ಸರವನ್ನು ಅಸಲಿ ಚಿನ್ನದ ಸರ ಅಂತ ಕೊಟ್ಟು ಎಸ್ಕೇಪ್ ಆಗೋದು ಇವರ ಕೆಲಸ. ಮನೆಗೆ ಹೋಗಿ ಪರಿಶೀಲಿಸಿದ್ದ ಹಣ ಕೊಟ್ಟಿದ್ದ ವ್ಯಕ್ತಿಗಳು ಶಾಕ್ ಆಗುತ್ತಿತ್ತು.

ಮೋಸ ಹೋದ ವಿಷಯ ಗೊತ್ತಾಗಿ ಹೊಸಕೋಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಸದ್ಯ ಪೊಲೀಸರಿಂದ ಪ್ರಮುಖ ಆರೋಪಿ ರಾಜೇಶ್ ಎಂಬಾತ ಸೇರಿ ನಾಲ್ವರ ಬಂಧನ ಮಾಡಲಾಗಿದೆ….

Ramesh Babu

Journalist

Recent Posts

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

9 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

9 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

14 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

20 hours ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

21 hours ago

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…

1 day ago