ನಕಲಿ ಚಿನ್ನವನ್ನು ಅಸಲಿ ಚಿನ್ನವೆಂದು ಲಕ್ಷಾಂತರ ರೂ. ಗೆ ಮಾರಾಟ: ಜನರಿಗೆ ಮೋಸ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್

ನಕಲಿ ಚಿನ್ನವನ್ನು ಅಸಲಿ ಚಿನ್ನವೆಂದು ಮಾರಾಟ ಮಾಡಿದ್ದ‌ ಕೋಲಾರದ ಖತರ್ನಾಕ್ ಗ್ಯಾಂಗ್ ಹೊಸಕೋಟೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಈ ಕೋಲಾರದ ಖತರ್ನಾಕ್ ಗ್ಯಾಂಗ್ ಹೊಸಕೋಟೆ, ನಂದಗುಡಿ, ಶಿಡ್ಲಘಟ್ಟದಲ್ಲಿ ಎಂಟು ಮಂದಿಗೆ 65 ಲಕ್ಷ ವಂಚನೆ ಮಾಡಿದ್ದಾರೆ. ಬೆಂಗಳೂರು ಹೊರಹೊಲಯವೇ ಇವರ ಟಾರ್ಗೆಟ್ ಏರಿಯಾಗಳು..

ತಾಲೂಕು ಕಚೇರಿ, ಹೋಟೆಲ್ ಗಳ ಬಳಿ ತೆಲುಗು ಭಾಷೆ ಮಾತಾಡೋರೇ ಇವರ ಬಂಡವಾಳ.. ಆತ್ಮೀಯ ಪರಿಚಿತರಂತೆ ಬಿಲ್ಡಪ್ ಕೊಟ್ಟು ಬ್ರೈನ್ ವಾಶ್ ಮಾಡಿ, ಕೇರಳದ ಒಂದು ಜಾಗದಲ್ಲಿ ಭೂಮಿ ಕೆಲಸ ಮಾಡುವಾಗ ಚಿನ್ನದ ಹಾರ ಸಿಕ್ಕಿದೆ..ಅದು ರಾಜಮಹಾರಾಜರ ಕಾಲದ ಚಿನ್ನದ ಹಾರ, ಈಗಿನ ಚಿನ್ನದ ರೇಟಿಗಿಂತ ಹೆಚ್ಚು.. ಹೀಗೆ ವ್ಯಕ್ತಿಗಳನ್ನ ಬ್ರೈನ್ ವಾಶ್ ಮಾಡಿ ಮೊಬೈಲ್ ನಲ್ಲಿ ನಕಲಿ ಚಿನ್ನದ ಹಾರವನ್ನು ತೋರಿಸೋದು.. ನಂಬಿಕೆ ಬರಲಿ ಅಂತ ಎರಡು ಚಿನ್ನದ ಅಸಲಿ ಗುಂಡುಗಳನ್ನ ತೋರಿಸಿ ಇದು ಸರದ ತುದಿಯ ಗುಂಡುಗಳು ಎಂದು ನಂಬಿಕೆ ಬರುವಂತೆ ಚರ್ಚೆ ಮಾಡೋದು, ಎಂಟು ಕೆಜಿ ಚಿನ್ನದ ಹಾರವನ್ನು ಕಡಿಮೆ ಬೆಲೆಗೆ ಕೊಡ್ತೇವೆಂದು ಯಾಮಾರಿಸಿ ಹಣ ಪಡೆದು ವಂಚನೆ ಮಾಡುತ್ತಿದ್ದ ಈ‌ ಗ್ಯಾಂಗ್.

ಎಲ್ಲಾ ಮೊಬೈಲ್ ನಲ್ಲೇ ನೋಡಿ ವಿಡಿಯೋ ಕಾಲ್ ಮೂಲಕ ಜಾಗ ಫಿಕ್ಸ್ ಮಾಡಿ, ಈ ಮೂಲಕ ನಕಲಿ ಚಿನ್ನದ ಸರವನ್ನು ಅಸಲಿ ಚಿನ್ನದ ಸರ ಅಂತ ಕೊಟ್ಟು ಎಸ್ಕೇಪ್ ಆಗೋದು ಇವರ ಕೆಲಸ. ಮನೆಗೆ ಹೋಗಿ ಪರಿಶೀಲಿಸಿದ್ದ ಹಣ ಕೊಟ್ಟಿದ್ದ ವ್ಯಕ್ತಿಗಳು ಶಾಕ್ ಆಗುತ್ತಿತ್ತು.

ಮೋಸ ಹೋದ ವಿಷಯ ಗೊತ್ತಾಗಿ ಹೊಸಕೋಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಸದ್ಯ ಪೊಲೀಸರಿಂದ ಪ್ರಮುಖ ಆರೋಪಿ ರಾಜೇಶ್ ಎಂಬಾತ ಸೇರಿ ನಾಲ್ವರ ಬಂಧನ ಮಾಡಲಾಗಿದೆ….

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

2 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

5 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

17 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

18 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

20 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

22 hours ago