ನನ್ನ ವಿರುದ್ಧ ಪ್ರತಿಭಟನೆ ಮಾಡುವುದಕ್ಕಿಂತ ಮೊದಲು ರಾತ್ರಿ 10:30 ರ ಸಮಯದಲ್ಲಿ ಸಕ್ಕರೆಗೊಲ್ಲಹಳ್ಳಿ ಗ್ರಾಮದಲ್ಲಿ ಶಾಸಕರ ಸಂಬಂಧಿಕರಾದ ಕೇಶವ್, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಸೇರಿದಂತೆ ಹಾಲಿ ಅಧ್ಯಕ್ಷರು ಸೇರಿ ಸಭೆ ಮಾಡಿ ಮರುದಿನ ಪೂರ್ವಯೋಜಿತವಾಗಿ ಸಹೋದರರ ಸಮಾನರಾದ ದಲಿತರನ್ನು ಹಾಗೂ ಸಂಘಟನೆಗಳನ್ನ ಒಗ್ಗೂಡಿಸಿ ನನ್ನ ವಿರುದ್ಧ ಸುಖಾಸುಮ್ಮನೆ ಪ್ರತಿಭಟನೆ ಮಾಡಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರುದ್ರಮೂರ್ತಿ ಹೇಳಿದರು.
ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂಚನಹಳ್ಳಿ ದಲಿತ ಸಮುದಯಕ್ಕೆ ಸೇರಿದ ಗ್ರಾಮಠಾಣಾ ಜಾಗವನ್ನು ಮಾಜಿ ಅಧ್ಯಕ್ಷರ ಪತಿ ರುದ್ರಮೂರ್ತಿ ಎಂಬುವರು ಪಿಡಿಒ ಮುನಿರಾಜು ಅವರಿಗೆ ಹಣದ ಆಮಿಷ ಒಡ್ಡಿ ನಕಲಿ ದಾಖಲೆ ಸೃಷ್ಟಿ ಮಾಡಿರುತ್ತಾರೆ, ಹಾಗೂ ನಕಲಿ ದಾಖಲೆಯ ಮೇಲೆ ಸದರಿ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿರುತ್ತಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಬಸವರಾಜ್ ಅವರು ಆರೋಪ ಮಾಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಪಂಚಾಯಿತಿ ಎದುರು ಧರಣಿ ನಡೆಸಿದ್ದರು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆ ಜಮೀನಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವ ದಾಖಲೆಗಳು ಇಲ್ಲ, ಲಿಂಗಯ್ಯ, ಮುನಿಮುತ್ತಯ್ಯ ಎಂಬ ಸಹೋದರರ ಹೆಸರಿನಲ್ಲಿದೆ. ದಲಿತರ ಭೂಮಿ ಎಂಬುದಕ್ಕೆ ಅವರಲ್ಲಿ ಯಾವ ಸೂಕ್ತ ದಾಖಲೆಗಳು ಏನಿದೆ? ಅವರ ಬಳಿ ಯಾವ ನಿಖರವಾದ ದಾಖಲೆ ಇಲ್ಲದೆ ನನ್ನ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎಂದು ಕಿಡಿಕಾರಿದರು.
ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಬಿಬಿಎಂಪಿಯಿಂದ ಬಿಡುಗಡೆಯಾಗಿದ್ದ ಅನುದಾನದಲ್ಲಿ 17ಲಕ್ಷ ಗ್ರಾಮ ಪಂಚಾಯಿತಿ ಖಾತೆಯಲ್ಲಿ ಇತ್ತು. ಅದು ಈಗ ಏನಾಗಿದೆ. ಯಾವ ಅಭಿವೃದ್ಧಿಗೆ ಅನುದಾನ ಬಳಸಿಕೊಂಡಿದ್ದಾರೆ ಎಂದು ಪ್ರಶ್ನೆ ಮಾಡಿದರು.
ಕೋನೇನಹಳ್ಳಿಯ ಗಾಣಗಪ್ಪನಕಟ್ಟೆ ದುರಸ್ತಿಗೆ 15ನೇ ಹಣಕಾಸು ಆಯೋಗದಿಂದ ಮಂಜೂರಾಗಿದ್ದ 10 ಲಕ್ಷ ರೂ. ಹಣ ಗುಳುಂ ಮಾಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನೀಲಿ ನಕಾಶೆಯಲ್ಲಿ ಕೇವಲ 50ಸಾವಿರ ಮಾತ್ರ ಇದೆ. ಆದರೆ ಆರೋಪ ಮಾಡಿರುವುದು 10ಲಕ್ಷ, ಇಲ್ಲೇ ಗೊತ್ತಾಗುತ್ತದೆ ಸುಖಾಸುಮ್ಮನೆ ಮಾಡಲಾದ ಸುಳ್ಳು ಆರೋಪ ಎಂದು ಹೇಳಿದರು.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…