ನಕಲಿ ದಾಖಲೆ ಸೃಷ್ಟಿಸಿ ದಲಿತರ ಜಾಗ ಕಬಳಿಕೆ ಆರೋಪ ವಿಚಾರ: ಪೂರ್ವಯೋಜಿತವಾಗಿ ಮಾಡಿದ ಆರೋಪ: ಆರೋಪದಲ್ಲಿ ನಿಜಾಂಶ ಕೊರತೆ ಇದೆ- ಕಾಂಗ್ರೆಸ್ ಮುಖಂಡ ರುದ್ರಮೂರ್ತಿ

ನನ್ನ ವಿರುದ್ಧ ಪ್ರತಿಭಟನೆ ಮಾಡುವುದಕ್ಕಿಂತ ಮೊದಲು ರಾತ್ರಿ 10:30 ರ ಸಮಯದಲ್ಲಿ ಸಕ್ಕರೆಗೊಲ್ಲಹಳ್ಳಿ‌ ಗ್ರಾಮದಲ್ಲಿ ಶಾಸಕರ ಸಂಬಂಧಿಕರಾದ ಕೇಶವ್, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಸೇರಿದಂತೆ ಹಾಲಿ ಅಧ್ಯಕ್ಷರು ಸೇರಿ ಸಭೆ ಮಾಡಿ ಮರುದಿನ ಪೂರ್ವಯೋಜಿತವಾಗಿ ಸಹೋದರರ ಸಮಾನರಾದ ದಲಿತರನ್ನು ಹಾಗೂ ಸಂಘಟನೆಗಳನ್ನ ಒಗ್ಗೂಡಿಸಿ ನನ್ನ ವಿರುದ್ಧ ಸುಖಾಸುಮ್ಮನೆ ಪ್ರತಿಭಟನೆ ಮಾಡಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರುದ್ರಮೂರ್ತಿ ಹೇಳಿದರು.

ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂಚನಹಳ್ಳಿ ದಲಿತ ಸಮುದಯಕ್ಕೆ ಸೇರಿದ ಗ್ರಾಮಠಾಣಾ ಜಾಗವನ್ನು ಮಾಜಿ ಅಧ್ಯಕ್ಷರ ಪತಿ ರುದ್ರಮೂರ್ತಿ ಎಂಬುವರು ಪಿಡಿಒ ಮುನಿರಾಜು ಅವರಿಗೆ ಹಣದ ಆಮಿಷ ಒಡ್ಡಿ ನಕಲಿ ದಾಖಲೆ ಸೃಷ್ಟಿ ಮಾಡಿರುತ್ತಾರೆ, ಹಾಗೂ ನಕಲಿ ದಾಖಲೆಯ ಮೇಲೆ ಸದರಿ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿರುತ್ತಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಬಸವರಾಜ್ ಅವರು ಆರೋಪ ಮಾಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಪಂಚಾಯಿತಿ ಎದುರು ಧರಣಿ ನಡೆಸಿದ್ದರು‌. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆ ಜಮೀನಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವ ದಾಖಲೆಗಳು ಇಲ್ಲ, ಲಿಂಗಯ್ಯ, ಮುನಿಮುತ್ತಯ್ಯ ಎಂಬ ಸಹೋದರರ ಹೆಸರಿನಲ್ಲಿದೆ. ದಲಿತರ ಭೂಮಿ ಎಂಬುದಕ್ಕೆ ಅವರಲ್ಲಿ ಯಾವ ಸೂಕ್ತ ದಾಖಲೆಗಳು ಏನಿದೆ? ಅವರ ಬಳಿ ಯಾವ ನಿಖರವಾದ ದಾಖಲೆ ಇಲ್ಲದೆ ನನ್ನ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎಂದು ಕಿಡಿಕಾರಿದರು.

ಚಿಕ್ಕಕಾಳೇನಹಳ್ಳಿ ಕೆರೆಯಿಂದ ರೈತರು ತಮ್ಮ ಜಮೀ‌ನುಗಳಿಗೆ ಮಣ್ಣುನ್ನ ತುಂಬಿಕೊಂಡು ಹೋಗಿದ್ದಾರೆ. ನಾನು ಯಾರಿಂದಲೂ ನಾಯಾಪೈಸೆ ಹಣ ತೆಗೆದುಕೊಂಡಿಲ್ಲ, ಅವರ ಬಳಿ ಈ ಕುರಿತು ಸಾಕ್ಷ್ಯಾಧಾರಗಳು ಇದ್ದರೆ ನೀಡಲಿ ಎಂದರು.

ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಬಿಬಿಎಂಪಿಯಿಂದ ಬಿಡುಗಡೆಯಾಗಿದ್ದ ಅನುದಾನದಲ್ಲಿ 17ಲಕ್ಷ ಗ್ರಾಮ ಪಂಚಾಯಿತಿ ಖಾತೆಯಲ್ಲಿ ಇತ್ತು. ಅದು ಈಗ ಏನಾಗಿದೆ. ಯಾವ ಅಭಿವೃದ್ಧಿಗೆ ಅನುದಾನ ಬಳಸಿಕೊಂಡಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಕೋನೇನಹಳ್ಳಿಯ ಗಾಣಗಪ್ಪನಕಟ್ಟೆ ದುರಸ್ತಿಗೆ 15ನೇ ಹಣಕಾಸು ಆಯೋಗದಿಂದ ಮಂಜೂರಾಗಿದ್ದ 10 ಲಕ್ಷ ರೂ. ಹಣ ಗುಳುಂ ಮಾಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನೀಲಿ ನಕಾಶೆಯಲ್ಲಿ ಕೇವಲ‌ 50‌ಸಾವಿರ ಮಾತ್ರ ಇದೆ. ಆದರೆ ಆರೋಪ ಮಾಡಿರುವುದು 10ಲಕ್ಷ, ಇಲ್ಲೇ ಗೊತ್ತಾಗುತ್ತದೆ ಸುಖಾಸುಮ್ಮನೆ ಮಾಡಲಾದ ಸುಳ್ಳು ಆರೋಪ ಎಂದು ಹೇಳಿದರು.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

5 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

7 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

7 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

14 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

14 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

17 hours ago