ನನ್ನ ವಿರುದ್ಧ ಪ್ರತಿಭಟನೆ ಮಾಡುವುದಕ್ಕಿಂತ ಮೊದಲು ರಾತ್ರಿ 10:30 ರ ಸಮಯದಲ್ಲಿ ಸಕ್ಕರೆಗೊಲ್ಲಹಳ್ಳಿ ಗ್ರಾಮದಲ್ಲಿ ಶಾಸಕರ ಸಂಬಂಧಿಕರಾದ ಕೇಶವ್, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಸೇರಿದಂತೆ ಹಾಲಿ ಅಧ್ಯಕ್ಷರು ಸೇರಿ ಸಭೆ ಮಾಡಿ ಮರುದಿನ ಪೂರ್ವಯೋಜಿತವಾಗಿ ಸಹೋದರರ ಸಮಾನರಾದ ದಲಿತರನ್ನು ಹಾಗೂ ಸಂಘಟನೆಗಳನ್ನ ಒಗ್ಗೂಡಿಸಿ ನನ್ನ ವಿರುದ್ಧ ಸುಖಾಸುಮ್ಮನೆ ಪ್ರತಿಭಟನೆ ಮಾಡಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರುದ್ರಮೂರ್ತಿ ಹೇಳಿದರು.
ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂಚನಹಳ್ಳಿ ದಲಿತ ಸಮುದಯಕ್ಕೆ ಸೇರಿದ ಗ್ರಾಮಠಾಣಾ ಜಾಗವನ್ನು ಮಾಜಿ ಅಧ್ಯಕ್ಷರ ಪತಿ ರುದ್ರಮೂರ್ತಿ ಎಂಬುವರು ಪಿಡಿಒ ಮುನಿರಾಜು ಅವರಿಗೆ ಹಣದ ಆಮಿಷ ಒಡ್ಡಿ ನಕಲಿ ದಾಖಲೆ ಸೃಷ್ಟಿ ಮಾಡಿರುತ್ತಾರೆ, ಹಾಗೂ ನಕಲಿ ದಾಖಲೆಯ ಮೇಲೆ ಸದರಿ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿರುತ್ತಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಬಸವರಾಜ್ ಅವರು ಆರೋಪ ಮಾಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಪಂಚಾಯಿತಿ ಎದುರು ಧರಣಿ ನಡೆಸಿದ್ದರು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆ ಜಮೀನಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವ ದಾಖಲೆಗಳು ಇಲ್ಲ, ಲಿಂಗಯ್ಯ, ಮುನಿಮುತ್ತಯ್ಯ ಎಂಬ ಸಹೋದರರ ಹೆಸರಿನಲ್ಲಿದೆ. ದಲಿತರ ಭೂಮಿ ಎಂಬುದಕ್ಕೆ ಅವರಲ್ಲಿ ಯಾವ ಸೂಕ್ತ ದಾಖಲೆಗಳು ಏನಿದೆ? ಅವರ ಬಳಿ ಯಾವ ನಿಖರವಾದ ದಾಖಲೆ ಇಲ್ಲದೆ ನನ್ನ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎಂದು ಕಿಡಿಕಾರಿದರು.
ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಬಿಬಿಎಂಪಿಯಿಂದ ಬಿಡುಗಡೆಯಾಗಿದ್ದ ಅನುದಾನದಲ್ಲಿ 17ಲಕ್ಷ ಗ್ರಾಮ ಪಂಚಾಯಿತಿ ಖಾತೆಯಲ್ಲಿ ಇತ್ತು. ಅದು ಈಗ ಏನಾಗಿದೆ. ಯಾವ ಅಭಿವೃದ್ಧಿಗೆ ಅನುದಾನ ಬಳಸಿಕೊಂಡಿದ್ದಾರೆ ಎಂದು ಪ್ರಶ್ನೆ ಮಾಡಿದರು.
ಕೋನೇನಹಳ್ಳಿಯ ಗಾಣಗಪ್ಪನಕಟ್ಟೆ ದುರಸ್ತಿಗೆ 15ನೇ ಹಣಕಾಸು ಆಯೋಗದಿಂದ ಮಂಜೂರಾಗಿದ್ದ 10 ಲಕ್ಷ ರೂ. ಹಣ ಗುಳುಂ ಮಾಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನೀಲಿ ನಕಾಶೆಯಲ್ಲಿ ಕೇವಲ 50ಸಾವಿರ ಮಾತ್ರ ಇದೆ. ಆದರೆ ಆರೋಪ ಮಾಡಿರುವುದು 10ಲಕ್ಷ, ಇಲ್ಲೇ ಗೊತ್ತಾಗುತ್ತದೆ ಸುಖಾಸುಮ್ಮನೆ ಮಾಡಲಾದ ಸುಳ್ಳು ಆರೋಪ ಎಂದು ಹೇಳಿದರು.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…