ನಕಲಿ ದಾಖಲೆ ಸೃಷ್ಟಿಸಿ ದಲಿತರ ಜಾಗ ಕಬಳಿಕೆ ಆರೋಪ ವಿಚಾರ: ಪೂರ್ವಯೋಜಿತವಾಗಿ ಮಾಡಿದ ಆರೋಪ: ಆರೋಪದಲ್ಲಿ ನಿಜಾಂಶ ಕೊರತೆ ಇದೆ- ಕಾಂಗ್ರೆಸ್ ಮುಖಂಡ ರುದ್ರಮೂರ್ತಿ

ನನ್ನ ವಿರುದ್ಧ ಪ್ರತಿಭಟನೆ ಮಾಡುವುದಕ್ಕಿಂತ ಮೊದಲು ರಾತ್ರಿ 10:30 ರ ಸಮಯದಲ್ಲಿ ಸಕ್ಕರೆಗೊಲ್ಲಹಳ್ಳಿ‌ ಗ್ರಾಮದಲ್ಲಿ ಶಾಸಕರ ಸಂಬಂಧಿಕರಾದ ಕೇಶವ್, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಸೇರಿದಂತೆ ಹಾಲಿ ಅಧ್ಯಕ್ಷರು ಸೇರಿ ಸಭೆ ಮಾಡಿ ಮರುದಿನ ಪೂರ್ವಯೋಜಿತವಾಗಿ ಸಹೋದರರ ಸಮಾನರಾದ ದಲಿತರನ್ನು ಹಾಗೂ ಸಂಘಟನೆಗಳನ್ನ ಒಗ್ಗೂಡಿಸಿ ನನ್ನ ವಿರುದ್ಧ ಸುಖಾಸುಮ್ಮನೆ ಪ್ರತಿಭಟನೆ ಮಾಡಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರುದ್ರಮೂರ್ತಿ ಹೇಳಿದರು.

ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂಚನಹಳ್ಳಿ ದಲಿತ ಸಮುದಯಕ್ಕೆ ಸೇರಿದ ಗ್ರಾಮಠಾಣಾ ಜಾಗವನ್ನು ಮಾಜಿ ಅಧ್ಯಕ್ಷರ ಪತಿ ರುದ್ರಮೂರ್ತಿ ಎಂಬುವರು ಪಿಡಿಒ ಮುನಿರಾಜು ಅವರಿಗೆ ಹಣದ ಆಮಿಷ ಒಡ್ಡಿ ನಕಲಿ ದಾಖಲೆ ಸೃಷ್ಟಿ ಮಾಡಿರುತ್ತಾರೆ, ಹಾಗೂ ನಕಲಿ ದಾಖಲೆಯ ಮೇಲೆ ಸದರಿ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿರುತ್ತಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಬಸವರಾಜ್ ಅವರು ಆರೋಪ ಮಾಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಪಂಚಾಯಿತಿ ಎದುರು ಧರಣಿ ನಡೆಸಿದ್ದರು‌. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆ ಜಮೀನಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವ ದಾಖಲೆಗಳು ಇಲ್ಲ, ಲಿಂಗಯ್ಯ, ಮುನಿಮುತ್ತಯ್ಯ ಎಂಬ ಸಹೋದರರ ಹೆಸರಿನಲ್ಲಿದೆ. ದಲಿತರ ಭೂಮಿ ಎಂಬುದಕ್ಕೆ ಅವರಲ್ಲಿ ಯಾವ ಸೂಕ್ತ ದಾಖಲೆಗಳು ಏನಿದೆ? ಅವರ ಬಳಿ ಯಾವ ನಿಖರವಾದ ದಾಖಲೆ ಇಲ್ಲದೆ ನನ್ನ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎಂದು ಕಿಡಿಕಾರಿದರು.

ಚಿಕ್ಕಕಾಳೇನಹಳ್ಳಿ ಕೆರೆಯಿಂದ ರೈತರು ತಮ್ಮ ಜಮೀ‌ನುಗಳಿಗೆ ಮಣ್ಣುನ್ನ ತುಂಬಿಕೊಂಡು ಹೋಗಿದ್ದಾರೆ. ನಾನು ಯಾರಿಂದಲೂ ನಾಯಾಪೈಸೆ ಹಣ ತೆಗೆದುಕೊಂಡಿಲ್ಲ, ಅವರ ಬಳಿ ಈ ಕುರಿತು ಸಾಕ್ಷ್ಯಾಧಾರಗಳು ಇದ್ದರೆ ನೀಡಲಿ ಎಂದರು.

ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಬಿಬಿಎಂಪಿಯಿಂದ ಬಿಡುಗಡೆಯಾಗಿದ್ದ ಅನುದಾನದಲ್ಲಿ 17ಲಕ್ಷ ಗ್ರಾಮ ಪಂಚಾಯಿತಿ ಖಾತೆಯಲ್ಲಿ ಇತ್ತು. ಅದು ಈಗ ಏನಾಗಿದೆ. ಯಾವ ಅಭಿವೃದ್ಧಿಗೆ ಅನುದಾನ ಬಳಸಿಕೊಂಡಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಕೋನೇನಹಳ್ಳಿಯ ಗಾಣಗಪ್ಪನಕಟ್ಟೆ ದುರಸ್ತಿಗೆ 15ನೇ ಹಣಕಾಸು ಆಯೋಗದಿಂದ ಮಂಜೂರಾಗಿದ್ದ 10 ಲಕ್ಷ ರೂ. ಹಣ ಗುಳುಂ ಮಾಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನೀಲಿ ನಕಾಶೆಯಲ್ಲಿ ಕೇವಲ‌ 50‌ಸಾವಿರ ಮಾತ್ರ ಇದೆ. ಆದರೆ ಆರೋಪ ಮಾಡಿರುವುದು 10ಲಕ್ಷ, ಇಲ್ಲೇ ಗೊತ್ತಾಗುತ್ತದೆ ಸುಖಾಸುಮ್ಮನೆ ಮಾಡಲಾದ ಸುಳ್ಳು ಆರೋಪ ಎಂದು ಹೇಳಿದರು.

Ramesh Babu

Journalist

Recent Posts

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

4 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

5 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

5 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

7 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

8 hours ago

ಜನ ಪ್ರತಿನಿಧಿಗಳೆಂಬ ಸಮಾಜ ಸೇವಕರೋ – ಸಂವಿಧಾನ ರಕ್ಷಕರೋ – ರೇಸು ಕುದುರೆಗಳೋ – ಗೋಮುಖ ವ್ಯಾಘ್ರಗಳೋ…..?

ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…

10 hours ago